ಬ್ರೇಕಿಂಗ್ ನ್ಯೂಸ್
07-04-21 02:52 pm Source: MYKHEL ಕ್ರೀಡೆ
ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು. ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.
This News Article Is A Copy Of MYKHEL
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm