ಬ್ರೇಕಿಂಗ್ ನ್ಯೂಸ್
07-04-21 02:52 pm Source: MYKHEL ಕ್ರೀಡೆ
ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು. ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.
This News Article Is A Copy Of MYKHEL
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm