ಬ್ರೇಕಿಂಗ್ ನ್ಯೂಸ್
08-04-21 12:58 pm Source: MYKHEL ಕ್ರೀಡೆ
ಚೆನ್ನೈ: ಏಪ್ರಿಲ್ 9ರಿಂದ ಆರಂಭಗೊಳ್ಳಲಿರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಎಲ್ಲಾ ಎಂಟು ತಂಡಗಳು ಸಿದ್ಧವಾಗಿವೆ. 2021ರ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಚಾಂಪಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಅಭ್ಯಾಸ ಪಂದ್ಯ ಮುಗಿಸಿದೆ. ಮೂರನೇ ಅಭ್ಯಾಸ ಪಂದ್ಯದಲ್ಲಿ ಟೀಮ್ ಪರ್ಪಲ್ ವಿರುದ್ಧ ನಿತೀಶ್ ರಾಣಾ ನಾಯಕತ್ವದ ಟೀಮ್ ಗೋಲ್ಡ್ 82 ರನ್ ಜಯ ಗಳಿಸಿದೆ.
ಬುಧವಾರ (ಏಪ್ರಿಲ್ 7) ನಡೆದ ಮೂರನೇ ಅಭ್ಯಾಸ ಪಂದ್ಯದಲ್ಲಿ ನಿತೀಶ್ ರಾಣಾ XI ಮತ್ತು ಟೀಮ್ ಪರ್ಪಲ್ ತಂಡಗಳು ಸೆಣಸಾಡಿದ್ದವು. ಇದರಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ನಿತೀಶ್ ರಾಣಾ ಪಡೆ ಜಯ ದಾಖಲಿಸಿದೆ. ಹಿಂದಿನ ಸೀಸನ್ನ ಕೆಲ ಪಂದ್ಯಗಳಲ್ಲಿ ನಿತೀಶ್ ಉತ್ತಮ ಬ್ಯಾಟಿಂಗ್ಗಾಗಿ ಗಮನ ಸೆಳೆದಿದ್ದರು.

ರಾಣಾ ಪ್ಲೇಯಿಂಗ್ XI
ನಿತೀಶ್ ರಾಣಾ ತಂಡದಲ್ಲಿ ವೆಂಕಟೇಶ್ ಅಯ್ಯರ್, ಕರುಣ್ ನಾಯರ್, ಶಕೀಬ್ ಅಲ್ ಹಸನ್, ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್, ಕಮಲೇಶ್ ನಗರ್ಕೋಟಿ, ಸುನಿಲ್ ನರೈನ್, ಸಂದೀಪ್ ವಾರಿಯರ್, ಶಿವಂ ಮಾವಿ ಮತ್ತು ಒಬ್ಬ ನೆಟ್ ಬೌಲರ್ ಇದ್ದರು. ಎದುರಾಳಿ ತಂಡದಲ್ಲಿ ಇಯಾನ್ ಮಾರ್ಗನ್, ಹರ್ಭಜನ್ ಸಿಂಗ್, ಶುಬ್ಮನ್ ಗಿಲ್ ಮೊದಲಾದವರಿದ್ದರು.

ಕೆಕೆಆರ್ಗೆ ಆರಂಭಿಕ ಪಂದ್ಯ
ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಏಪ್ರಿಲ್ 11ರಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟೂರ್ನಿಯ ಮೊದಲ ಪಂದ್ಯ ಆಡಲಿವೆ.
\
ಪಂದ್ಯದ ಸಂಕ್ಷಿಪ್ತ ಸ್ಕೋರ್ಕಾರ್ಡ್
* ಟೀಮ್ ಗೋಲ್ಡ್: 195/6 (19.4), ವೆಂಕಟೇಶ್ ಅಯ್ಯರ್ 27 (22), ಕರುಣ್ ನಾಯರ್ 41 (30), ಶಕೀಬ್ ಅಲ್ ಹಸನ್ 17 (9), ಆ್ಯಂಡ್ರೆ ರಸೆಲ್ 4 (5), ದಿನೇಶ್ ಕಾರ್ತಿಕ್ 42 (19)*, ಕಮಲೇಶ್ ನಗರ್ಕೋಟಿ 15 (10).
* ಟೀಮ್ ಪರ್ಪಲ್: 113 ಆಲ್ಔಟ್, ರಾಹುಲ್ ಟ್ರಿಪಾಠಿ 32(26), ಟಿಮ್ ಸೀಫರ್ಟ್ 12(12), ಶೆಲ್ಡನ್ ಜಾಕ್ಸನ್ 9(11), ಬೆನ್ ಕಟ್ಟಿಂಗ್ 6(13), ಹರ್ಭಜನ್ ಸಿಂಗ್ 6(4), ಪವನ್ ನೇಗಿ 5(11) ರನ್
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm