ಬ್ರೇಕಿಂಗ್ ನ್ಯೂಸ್
23-08-20 04:55 pm Headline Karnataka News Network ಕ್ರೀಡೆ
ಮುಂಬೈ: ಭಾರತ ತಂಡದ ಮಾಜಿ ನಾಯಕ ಧೋನಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳ ನಡುವೆ ಗಲಾಟೆಯಾಗಿದ್ದು, ಓರ್ವನಿಗೆ ಗಂಭೀರವಾಗಿ ಗಾಯವಾಗಿದೆ.
ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕುರುಂದವಾಡ್ ಎಂಬಲ್ಲಿ ನಡೆದಿದ್ದು, ವರದಿಯ ಪ್ರಕಾರ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯೋರ್ವನಿಗೆ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಕೇವಲ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಅಗಸ್ಟ್ 15ರಂದು ನಿವೃತ್ತಿ ಘೋಷಣೆ ಮಾಡಿದ ಧೋನಿಯವ ಬ್ಯಾನರ್ ಅನ್ನು ಕುರುಂದವಾಡ್ನಲ್ಲಿ ಎಂಎಸ್ಡಿ ಅಭಿಮಾನಿಗಳು ಹಾಕಿದ್ದರು. ಕಳೆದ ಶನಿವಾರ ರೋಹಿತ್ ಶರ್ಮಾ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಬಂದಿದ್ದು, ಇದರ ಸಲುವಾಗಿ ರೋಹಿತ್ ಅಭಿಮಾನಿಗಳು ಕೂಡ ಇದೇ ಜಾಗದಲ್ಲಿ ಬ್ಯಾನರ್ ಹಾಕಿದ್ದಾರೆ. ಈ ವೇಳೆ ಧೋನಿಯವರ ಬ್ಯಾನರ್ ಅನ್ನು ಯಾರೋ ಕಿತ್ತು ಹಾಕಿದ್ದಾರೆ.
ನೆಚ್ಚಿನ ಆಟಗಾರನ ಬ್ಯಾನರ್ ಅನ್ನು ಕಿತ್ತು ಹಾಕಿದ್ದಾರೆ ಎಂದು ರೊಚ್ಚಿಗೆಂದ ಧೋನಿ ಅಭಿಮಾನಿಗಳು, ರೋಹಿತ್ ಅಭಿಮಾನಿಯೋರ್ವನ ಜೊತೆ ಜಗಳವಾಡಿದ್ದಾರೆ. ಈ ವೇಳೆ ರೋಹಿತ್ ಅಭಿಮಾನಿ ಕೂಡ ಗಲಾಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯನ್ನು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದ ಆ ಯುವಕ ಆಸ್ಪತ್ರೆ ಸೇರಿದ್ದಾನೆ.
ಈ ವಿಚಾರ ವೈರಲ್ ಆಗಿ ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದಂತೆ ಬೇಸರಗೊಂಡ ಭಾರತದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು, ಆಟಗಾರರು ಹೆಚ್ಚು ಮಾತನಾಡುವುದಿಲ್ಲ ನಿಜ. ಆದರೆ ಅವರು ಪರಸ್ಪರ ಜೊತೆಯಾಗಿ ಇರುತ್ತಾರೆ. ಅವರು ಅಗತ್ಯವಿರುವಷ್ಟು ಮಾತ್ರ ಮಾತನಾಡುತ್ತಾರೆ ಆದರೆ ಕೆಲವು ಅಭಿಮಾನಿಗಳು ಹುಚ್ಚರಾಗಿದ್ದಾರೆ. ದಯವಿಟ್ಟು ಪರಸ್ಪರರ ಕಿತ್ತಾಡಿಕೊಳ್ಳಬೇಡಿ ಮತ್ತು ಟೀಮ್ ಇಂಡಿಯಾವನ್ನು ಒಂದಾಗಿ ಪರಿಗಣಿಸಿ ಎಂದು ಟ್ವೀಟ್ ಮಾಡಿದ್ದಾರೆ.
Kya karte rehte ho paagalon.
— Virender Sehwag (@virendersehwag) August 23, 2020
Aapas mein players are either fond of each other or just don't talk much, kaam se kaam rakhte hain.
But kuchh fans alag hi level ke pagle hain. Jhagda Jhagdi mat karo, Team India ko- as one yaad karo. pic.twitter.com/i2ZpcDVogE
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm