ಬ್ರೇಕಿಂಗ್ ನ್ಯೂಸ್
23-08-20 04:55 pm Headline Karnataka News Network ಕ್ರೀಡೆ
ಮುಂಬೈ: ಭಾರತ ತಂಡದ ಮಾಜಿ ನಾಯಕ ಧೋನಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳ ನಡುವೆ ಗಲಾಟೆಯಾಗಿದ್ದು, ಓರ್ವನಿಗೆ ಗಂಭೀರವಾಗಿ ಗಾಯವಾಗಿದೆ.
ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕುರುಂದವಾಡ್ ಎಂಬಲ್ಲಿ ನಡೆದಿದ್ದು, ವರದಿಯ ಪ್ರಕಾರ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯೋರ್ವನಿಗೆ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಕೇವಲ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಅಗಸ್ಟ್ 15ರಂದು ನಿವೃತ್ತಿ ಘೋಷಣೆ ಮಾಡಿದ ಧೋನಿಯವ ಬ್ಯಾನರ್ ಅನ್ನು ಕುರುಂದವಾಡ್ನಲ್ಲಿ ಎಂಎಸ್ಡಿ ಅಭಿಮಾನಿಗಳು ಹಾಕಿದ್ದರು. ಕಳೆದ ಶನಿವಾರ ರೋಹಿತ್ ಶರ್ಮಾ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಬಂದಿದ್ದು, ಇದರ ಸಲುವಾಗಿ ರೋಹಿತ್ ಅಭಿಮಾನಿಗಳು ಕೂಡ ಇದೇ ಜಾಗದಲ್ಲಿ ಬ್ಯಾನರ್ ಹಾಕಿದ್ದಾರೆ. ಈ ವೇಳೆ ಧೋನಿಯವರ ಬ್ಯಾನರ್ ಅನ್ನು ಯಾರೋ ಕಿತ್ತು ಹಾಕಿದ್ದಾರೆ.
ನೆಚ್ಚಿನ ಆಟಗಾರನ ಬ್ಯಾನರ್ ಅನ್ನು ಕಿತ್ತು ಹಾಕಿದ್ದಾರೆ ಎಂದು ರೊಚ್ಚಿಗೆಂದ ಧೋನಿ ಅಭಿಮಾನಿಗಳು, ರೋಹಿತ್ ಅಭಿಮಾನಿಯೋರ್ವನ ಜೊತೆ ಜಗಳವಾಡಿದ್ದಾರೆ. ಈ ವೇಳೆ ರೋಹಿತ್ ಅಭಿಮಾನಿ ಕೂಡ ಗಲಾಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯನ್ನು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದ ಆ ಯುವಕ ಆಸ್ಪತ್ರೆ ಸೇರಿದ್ದಾನೆ.
ಈ ವಿಚಾರ ವೈರಲ್ ಆಗಿ ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದಂತೆ ಬೇಸರಗೊಂಡ ಭಾರತದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು, ಆಟಗಾರರು ಹೆಚ್ಚು ಮಾತನಾಡುವುದಿಲ್ಲ ನಿಜ. ಆದರೆ ಅವರು ಪರಸ್ಪರ ಜೊತೆಯಾಗಿ ಇರುತ್ತಾರೆ. ಅವರು ಅಗತ್ಯವಿರುವಷ್ಟು ಮಾತ್ರ ಮಾತನಾಡುತ್ತಾರೆ ಆದರೆ ಕೆಲವು ಅಭಿಮಾನಿಗಳು ಹುಚ್ಚರಾಗಿದ್ದಾರೆ. ದಯವಿಟ್ಟು ಪರಸ್ಪರರ ಕಿತ್ತಾಡಿಕೊಳ್ಳಬೇಡಿ ಮತ್ತು ಟೀಮ್ ಇಂಡಿಯಾವನ್ನು ಒಂದಾಗಿ ಪರಿಗಣಿಸಿ ಎಂದು ಟ್ವೀಟ್ ಮಾಡಿದ್ದಾರೆ.
Kya karte rehte ho paagalon.
— Virender Sehwag (@virendersehwag) August 23, 2020
Aapas mein players are either fond of each other or just don't talk much, kaam se kaam rakhte hain.
But kuchh fans alag hi level ke pagle hain. Jhagda Jhagdi mat karo, Team India ko- as one yaad karo. pic.twitter.com/i2ZpcDVogE
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm