ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm