ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm