ಬ್ರೇಕಿಂಗ್ ನ್ಯೂಸ್
10-04-21 06:39 pm Source: MYKHEL ಕ್ರೀಡೆ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಶುಕ್ರವಾರ (ಏಪ್ರಿಲ್ 9) ಆರಂಭವಾಗಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ 2 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭವನ್ನು ಮಾಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದ ಖುಷಿ ಒಂದೆಡೆಯಾದರೆ ವಿರಾಟ್ ಕೊಹ್ಲಿ ಅವರಿಗೆ ಇದರ ಜೊತೆ ಮತ್ತೊಂದು ಖುಷಿ ಸಿಕ್ಕಿದೆ. ಹೌದು ವಿರಾಟ್ ಕೊಹ್ಲಿ ಅವರು ಮುಂಬೈ ವಿರುದ್ಧದ ಪಂದ್ಯದ ವೇಳೆ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಟಿ ಟ್ವೆಂಟಿ ಪಂದ್ಯಗಳಲ್ಲಿ ಅತೀ ವೇಗವಾಗಿ 6000 ರನ್ ಪೂರೈಸಿದ ನಾಯಕ ಎಂಬ ದಾಖಲೆಯನ್ನು ವಿರಾಟ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಮುಂಬೈ ವಿರುದ್ಧದ ಪಂದ್ಯದಲ್ಲಿ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಬಂದಿದ್ದ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಗಳಿಸಿದರು. ನಾಯಕನಾಗಿ ಟಿ ಟ್ವೆಂಟಿ ಪಂದ್ಯಗಳಲ್ಲಿ 6000 ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 168 ಇನ್ನಿಂಗ್ಸ್.
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರು ಸಹ ಈ ಸಾಧನೆಯನ್ನು ಮಾಡುವ ಹೊಸ್ತಿಲಲ್ಲಿದ್ದರು. 252 ಇನ್ನಿಂಗ್ಸ್ಗಳಲ್ಲಿ 5872 ರನ್ ಗಳಿಸಿರುವ ಎಂಎಸ್ ಧೋನಿ ನಾಯಕನಾಗಿ 6000 ಟಿ ಟ್ವೆಂಟಿ ರನ್ ಗಳಿಸುವ ಸನಿಹದಲ್ಲಿದ್ದರು ಆದರೆ ವಿರಾಟ್ ಧೋನಿಗೂ ಮುನ್ನ ಆ ದಾಖಲೆಯನ್ನು ಮುಟ್ಟಿದ್ದಾರೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm