ಬ್ರೇಕಿಂಗ್ ನ್ಯೂಸ್
14-04-21 09:18 pm Source: MYKHEL ಕ್ರೀಡೆ
ರಾಜಸ್ಥಾನ್ ರಾಯಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ಎಡವಿ ಸೋಲು ಕಂಡಿತು. ಈ ಸೋಲಿನ ನಂತರ ಮತ್ತೊಂದು ಆಘಾತ ರಾಜಸ್ಥಾನ ತಂಡಕ್ಕೆ ಎದುರಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿಯುವ ಅಂಕಷ್ಟಕ್ಕೆ ಸಿಲುಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಪಡೆಯುವ ವೇಳೆ ಬೆನ್ ಸ್ಟೋಕ್ಸ್ ಬೆರಳಿಗೆ ಗಾಯಮಾಡಿಕೊಂಡಿದ್ದರು. ಈಗ ಅವರ ಬೆರಳಿನ ಮೂಳೆ ಮುರಿತಕ್ಕೊಳಗಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಪ್ರಮುಖ ಆಲ್ರೌಂಡರ್ ಅವರನ್ನು ಮುಂದಿನ ಪಂದ್ಯಗಳಿಂದ ರಾಜಸ್ಥಾನ್ ರಾಯಲ್ಸ್ ಕಳೆದುಕೊಳ್ಳಲಿದೆ.
ಆದರೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಬೆನ್ ಸ್ಟೋಕ್ಸ್ ಅವರ ಸ್ಥಾನಕ್ಕೆ ಸಮರ್ಥ ಪರ್ಯಾಯ ಆಟಗಾರನನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಬೇಕಿದೆ. ಹಾಗಾದರೆ ತಂಡದಲ್ಲಿರುವ ಆಟಗಾರರ ಪೈಕಿ ಬೆನ್ ಸ್ಟೋಕ್ಸ್ ಸ್ಥಾನವನ್ನು ಆಕ್ರಮಿಸಬಲ್ಲ ಐವರು ಆಟಗಾರರು ಯಾರು ಎಂದು ಬನ್ನಿ ನೋಡೋಣ..

ಡೇವಿಡ್ ಮಿಲ್ಲರ್
ಬೆನ್ ಸ್ಟೋಕ್ಸ್ ಸ್ಥಾನವನ್ನು ಅತ್ಯಂತ ಸಮರ್ಥವಾಗಿ ತುಂಬಬಲ್ಲ ಪ್ರಮುಖ ಆಟಗಾರ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್. ದಕ್ಷಿಣ ಆಫ್ರಿಕಾದ ಈ ಆಟಗಾರ ಬೆನ್ ಸ್ಟೋಕ್ ಶೈಲಿಯಲ್ಲಿಯೇ ಪವರ್ ಹಿಟ್ಟಿಂಗ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಬೌಲಿಂಗ್ ಸಾಮರ್ಥ್ಯವಿಲ್ಲದಿದ್ದರೂ ಬ್ಯಾಟಿಂಗ್ನಲ್ಲಿ ತಂಡಕ್ಕೆ ಅದ್ಭುತವಾಗಿ ನೆರವಾಗಬಲ್ಲರು. ಐಪಿಎಲ್ನಲ್ಲಿ ಅತ್ಯುತ್ತಮ ಅನುಭವ ಹೊಂದಿರುವ ಮಿಲ್ಲರ್ 80 ಪಂದ್ಯಗಳಲ್ಲಿ 1850 ರನ್ಗಳಿಸಿದ್ದಾರೆ. ಮಿಲ್ಲರ್ ಐಪಿಎಲ್ನಲ್ಲಿ ಒಂದು ಶತಕ ಹಾಗೂ 9 ಅರ್ಧ ಶತಕವನ್ನು ದಾಖಲಿಸಿದ್ದಾರೆ.

ಲಿಯಾಮ್ ಲೆವಿಂಗ್ಸ್ಟನ್
2021ರ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಲಿಯಾಮ್ ಲೆವಿಂಗ್ಸ್ಟನ್ ಅವರನ್ನು 75 ಲಕ್ಷ ರೂಪಾಯಿಗಳಿಗೆ ಕೊಂಡುಕೊಂಡಿದೆ. 2020 ಆವೃತ್ತಿಯಲ್ಲಿ ಇಂಗ್ಲೆಂಡ್ನ ಈ ಆಟಗಾರ ಐಪಿಎಲ್ನಲ್ಲಿ ಭಾಗಿಯಾಗಿರಲಿಲ್ಲ. ಆದರೆ 2019ರಲ್ಲಿ ರಾಜಸ್ಥಾನ್ ರಾಯಲ್ಸ್ ಪರವಾಗಿಯೇ ಆಡಿದ್ದ ಇವರು 4 ಪಂದ್ಯಗಳಲ್ಲಿ 71 ರನ್ಗಳಿಸಿದ್ದಾರೆ.

ಆಂಡ್ರೋ ಟೈ
ಬೆನ್ ಸ್ಟೋಕ್ಸ್ ವಿದೇಶಿ ಆಟಗಾರನಾಗಿರುವ ಕಾರಣ ಅವರ ಸ್ಥಾನವನ್ನು ತುಂಬಬಲ್ಲ ಆಟಗಾರನಾಗಿ ಆಂಡ್ರೋ ಟೈ ಅವರನ್ನು ಕೂಡ ಪರಿಗಣಿಸುವ ಅವಕಾಶವಿದೆ. ಬ್ಯಾಟಿಂಗ್ನಲ್ಲಿ ಅಲ್ಲದಿದ್ದರೂ ಬೌಲಿಂಗ್ ವಿಭಾಗದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸಾಮರ್ಥ್ಯವನ್ನು ಹೆಚ್ಚಿಸಲು ಇದು ಕಾರಣವಾಗಲಿದೆ.

ಯಶಸ್ವಿ ಜೈಸ್ವಾಲ್
ಅನುಭವಿ ಬೆನ್ ಸ್ಟೋಕ್ಸ್ ಸ್ಥಾನವನ್ನು ತುಂಬಬಲ್ಲ ಇನ್ನೋರ್ವ ಆಟಗಾರ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್. 2020ರ ಐಪಿಎಲ್ಗೆ ಮುನ್ನ ಆರ್ಆರ್ ಜೈಸ್ವಾಲ್ ಅವರನ್ನು 2.4 ಕೋಟಿ ನೀಡಿ ತಂಡಕ್ಕೆ ಸೇರ್ಪಡೆಗೊಳಿಸಿತ್ತು. ಕಳೆದ ಆವೃತ್ತಿಯಲ್ಲಿ ಜೈಸ್ವಾಲ್ 3 ಪಂದ್ಯಗಳಲ್ಲಿ ಆಡಲು ಅವಕಾಶ ಪಡೆದಿದ್ದರು.

ಅನುಜ್ ರಾವತ್ 21ರ ಹರೆಯದ ಅನುಜ್
ರಾವತ್ ಬೆನ್ ಸ್ಟೋಕ್ಸ್ ಸ್ಥಾನಕ್ಕೆ ಸೂಕ್ತವೆನಿಸಬಲ್ಲ ಮತ್ತೋರ್ವ ಆಟಗಾರ. ವಿಕೆಟ್ ಕೀಪರ್ ಆಗಿಯೂ ತಂಡಕ್ಕೆ ಕೊಡುಗೆ ನೀಡಬಲ್ಲವರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರವಾಗಿ ಮೊದಲ ಪಂದ್ಯದಲ್ಲಿ 8 ಬೌಲರ್ಗಳು ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದರು. ಹೀಗಾಗಿ ಆಲ್ರೌಂಡರ್ನ ಅವಶ್ಯಕತೆ ತಂಡಕ್ಕೆ ಅನಿವಾರ್ಯವಿಲ್ಲ. ಹೀಗಾಗಿ ಅನುಜ್ ರಾವತ್ ಅವರಂತಾ ಪೂರ್ಣಕಾಲಿಕ ಬ್ಯಾಟ್ಸ್ಮನ್ನನ್ನು ಸೇರಿಸಿಕೊಂಡರೆ ಅಚ್ಚರಿಯಿಲ್ಲ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm