ಬ್ರೇಕಿಂಗ್ ನ್ಯೂಸ್
15-04-21 10:58 am Source: MYKHEL ಕ್ರೀಡೆ
ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಿಂಚುತ್ತಿದ್ದರೂ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ಗೆ ಬಂದಾಗ ಪ್ರತಿ ಬಾರಿಯೂ ನೀರಸ ಪ್ರದರ್ಶನವನ್ನೇ ನೀಡುತ್ತಿದ್ದರು. ಕಳೆದ ಆವೃತ್ತಿಯಲ್ಲಂತೂ ಪಂಜಾಬ್ ಪರವಾಗಿ ಆಘಾತಕಾರಿ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಆದರೆ ಈ ಬಾರಿ ಆರ್ಸಿಬಿ ಪಾಳಯವನ್ನು ಸೇರಿಕೊಂಡಿರುವ ಮ್ಯಾಕ್ಸ್ವೆಲ್ ಎರಡು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಮ್ಯಾಕ್ಸ್ವೆಲ್ ಯಶಸ್ಸಿನ ಹಿಂದೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಈ ಆವೃತ್ತಿಯಲ್ಲಿ ಹೊಸ ತಂಡದ ಪರವಾಗಿ ಆಡುತ್ತಿರುವುದು ಗ್ಲೆನ್ ಮ್ಯಾಕ್ಸ್ವೆಲ್ಗೆ ನಿಜವಾಗಿಯೂ ಸಹಾಯವಾಗುತ್ತಿದೆ. ಎರಡು ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡರೆ ವಿರಾಟ್ ಕೊಹ್ಲಿ ಜೊತೆಗೆ ಅದ್ಭುತವಾಗಿ ಆಡಿದ್ದಾರೆ. ಹಾಗಾಗಿ ವಿರಾಟ್ ಕೊಹ್ಲಿ ಮ್ಯಾಕ್ಸ್ವೆಲ್ ಪಾಲಿಗೆ ದೊಡ್ಡ ಶಕ್ತಿಯಾಗಿದ್ದಾರೆ ಎನಿಸುತ್ತದೆ" ಎಂದು ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ! "ವಿರಾಟ್ ಕೊಹ್ಲಿ ಮ್ಯಾಕ್ಸ್ವೆಲ್ ಅವರ ಏಕಾಗ್ರತೆಯನ್ನು ಮರಳುವಂತೆ ಮಾಡಿದ್ದಾರೆ. ಅವರ ಎದೆ ಬಡಿತವನ್ನು ಕಡಿಮೆಯಾಗುವಂತೆ ಮಾಡಿದ್ದಾರೆ. ಮ್ಯಾಕ್ಸ್ವೆಲ್ಗೆ ಕೊಹ್ಲಿ ಅತ್ಯುತ್ತಮ ಜೊತೆಗಾರನಾಗಿದ್ದಾರೆ. ಹೀಗಾಗಿ ಟೂರ್ನಿಯಲ್ಲಿ ಅತ್ಯುತ್ತಮ ಮನಸ್ಥಿತಿಯನ್ನು ಅವರು ವ್ಯಕ್ತಪಡಿಸಿದ್ದು ಟೂರ್ನಿಯನ್ನು ಅದ್ಭುತವಾಗಿ ಆರಂಭಿಸಿದ್ದಾರೆ" ಎಂದು ಮ್ಯಾಕ್ಸ್ವೆಲ್ ಮೇಲೆ ವಿರಾಟ್ ಕೊಹ್ಲಿ ಬೀರಿದ ಪರಿಣಾಮವನ್ನು ಬ್ರೇಟ್ ಲೀ ವಿವರಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 41 ಎಸೆತಗಳಲ್ಲಿ 59 ರನ್ ಬಾರಿಸಿ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ನೀಡಿದರು. ಎಂಎ ಚಿದಂಬರಂ ಸ್ಟೇಡಿಂನ ಕಠಿಣವಾದ ಪಿಚ್ನಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರರು ಶೀಘ್ರವಾಗಿ ವಿಕೆಟ್ ಕಳೆದುಕೊಂಡರೂ ಮ್ಯಾಕ್ಸ್ವೆಲ್ ಇನ್ನಿಂಗ್ಸ್ ತಂಡವ ಮೊತ್ತವನ್ನು ಉತ್ತಮಗೊಳಿಸಲು ಕಾರಣವಾಗಿತ್ತು.
ಗ್ಲೆನ್ ಮ್ಯಾಕ್ಸ್ವೆಲ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಬಾರಿಸಿದ ಅರ್ಧ ಶತಕ ಕಳೆದ ನಾಲ್ಕು ಆವೃತ್ತಿಗಳಲ್ಲಿ ಬಂದ ಮೊದಲ 50+ ರನ್ ಆಗಿದೆ. ಇದು ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ಬಾರಿಸಿದ ಕೇವಲ 7ನೇ ಅರ್ಧ ಶತಕವಾಗಿದೆ.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm