ಬ್ರೇಕಿಂಗ್ ನ್ಯೂಸ್
15-04-21 10:58 am Source: MYKHEL ಕ್ರೀಡೆ
ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಿಂಚುತ್ತಿದ್ದರೂ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ಗೆ ಬಂದಾಗ ಪ್ರತಿ ಬಾರಿಯೂ ನೀರಸ ಪ್ರದರ್ಶನವನ್ನೇ ನೀಡುತ್ತಿದ್ದರು. ಕಳೆದ ಆವೃತ್ತಿಯಲ್ಲಂತೂ ಪಂಜಾಬ್ ಪರವಾಗಿ ಆಘಾತಕಾರಿ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಆದರೆ ಈ ಬಾರಿ ಆರ್ಸಿಬಿ ಪಾಳಯವನ್ನು ಸೇರಿಕೊಂಡಿರುವ ಮ್ಯಾಕ್ಸ್ವೆಲ್ ಎರಡು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಮ್ಯಾಕ್ಸ್ವೆಲ್ ಯಶಸ್ಸಿನ ಹಿಂದೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಈ ಆವೃತ್ತಿಯಲ್ಲಿ ಹೊಸ ತಂಡದ ಪರವಾಗಿ ಆಡುತ್ತಿರುವುದು ಗ್ಲೆನ್ ಮ್ಯಾಕ್ಸ್ವೆಲ್ಗೆ ನಿಜವಾಗಿಯೂ ಸಹಾಯವಾಗುತ್ತಿದೆ. ಎರಡು ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡರೆ ವಿರಾಟ್ ಕೊಹ್ಲಿ ಜೊತೆಗೆ ಅದ್ಭುತವಾಗಿ ಆಡಿದ್ದಾರೆ. ಹಾಗಾಗಿ ವಿರಾಟ್ ಕೊಹ್ಲಿ ಮ್ಯಾಕ್ಸ್ವೆಲ್ ಪಾಲಿಗೆ ದೊಡ್ಡ ಶಕ್ತಿಯಾಗಿದ್ದಾರೆ ಎನಿಸುತ್ತದೆ" ಎಂದು ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ! "ವಿರಾಟ್ ಕೊಹ್ಲಿ ಮ್ಯಾಕ್ಸ್ವೆಲ್ ಅವರ ಏಕಾಗ್ರತೆಯನ್ನು ಮರಳುವಂತೆ ಮಾಡಿದ್ದಾರೆ. ಅವರ ಎದೆ ಬಡಿತವನ್ನು ಕಡಿಮೆಯಾಗುವಂತೆ ಮಾಡಿದ್ದಾರೆ. ಮ್ಯಾಕ್ಸ್ವೆಲ್ಗೆ ಕೊಹ್ಲಿ ಅತ್ಯುತ್ತಮ ಜೊತೆಗಾರನಾಗಿದ್ದಾರೆ. ಹೀಗಾಗಿ ಟೂರ್ನಿಯಲ್ಲಿ ಅತ್ಯುತ್ತಮ ಮನಸ್ಥಿತಿಯನ್ನು ಅವರು ವ್ಯಕ್ತಪಡಿಸಿದ್ದು ಟೂರ್ನಿಯನ್ನು ಅದ್ಭುತವಾಗಿ ಆರಂಭಿಸಿದ್ದಾರೆ" ಎಂದು ಮ್ಯಾಕ್ಸ್ವೆಲ್ ಮೇಲೆ ವಿರಾಟ್ ಕೊಹ್ಲಿ ಬೀರಿದ ಪರಿಣಾಮವನ್ನು ಬ್ರೇಟ್ ಲೀ ವಿವರಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 41 ಎಸೆತಗಳಲ್ಲಿ 59 ರನ್ ಬಾರಿಸಿ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ನೀಡಿದರು. ಎಂಎ ಚಿದಂಬರಂ ಸ್ಟೇಡಿಂನ ಕಠಿಣವಾದ ಪಿಚ್ನಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರರು ಶೀಘ್ರವಾಗಿ ವಿಕೆಟ್ ಕಳೆದುಕೊಂಡರೂ ಮ್ಯಾಕ್ಸ್ವೆಲ್ ಇನ್ನಿಂಗ್ಸ್ ತಂಡವ ಮೊತ್ತವನ್ನು ಉತ್ತಮಗೊಳಿಸಲು ಕಾರಣವಾಗಿತ್ತು.
ಗ್ಲೆನ್ ಮ್ಯಾಕ್ಸ್ವೆಲ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಬಾರಿಸಿದ ಅರ್ಧ ಶತಕ ಕಳೆದ ನಾಲ್ಕು ಆವೃತ್ತಿಗಳಲ್ಲಿ ಬಂದ ಮೊದಲ 50+ ರನ್ ಆಗಿದೆ. ಇದು ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ಬಾರಿಸಿದ ಕೇವಲ 7ನೇ ಅರ್ಧ ಶತಕವಾಗಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm