ಬ್ರೇಕಿಂಗ್ ನ್ಯೂಸ್
15-04-21 10:58 am Source: MYKHEL ಕ್ರೀಡೆ
ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಿಂಚುತ್ತಿದ್ದರೂ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ಗೆ ಬಂದಾಗ ಪ್ರತಿ ಬಾರಿಯೂ ನೀರಸ ಪ್ರದರ್ಶನವನ್ನೇ ನೀಡುತ್ತಿದ್ದರು. ಕಳೆದ ಆವೃತ್ತಿಯಲ್ಲಂತೂ ಪಂಜಾಬ್ ಪರವಾಗಿ ಆಘಾತಕಾರಿ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಆದರೆ ಈ ಬಾರಿ ಆರ್ಸಿಬಿ ಪಾಳಯವನ್ನು ಸೇರಿಕೊಂಡಿರುವ ಮ್ಯಾಕ್ಸ್ವೆಲ್ ಎರಡು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಮ್ಯಾಕ್ಸ್ವೆಲ್ ಯಶಸ್ಸಿನ ಹಿಂದೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಈ ಆವೃತ್ತಿಯಲ್ಲಿ ಹೊಸ ತಂಡದ ಪರವಾಗಿ ಆಡುತ್ತಿರುವುದು ಗ್ಲೆನ್ ಮ್ಯಾಕ್ಸ್ವೆಲ್ಗೆ ನಿಜವಾಗಿಯೂ ಸಹಾಯವಾಗುತ್ತಿದೆ. ಎರಡು ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡರೆ ವಿರಾಟ್ ಕೊಹ್ಲಿ ಜೊತೆಗೆ ಅದ್ಭುತವಾಗಿ ಆಡಿದ್ದಾರೆ. ಹಾಗಾಗಿ ವಿರಾಟ್ ಕೊಹ್ಲಿ ಮ್ಯಾಕ್ಸ್ವೆಲ್ ಪಾಲಿಗೆ ದೊಡ್ಡ ಶಕ್ತಿಯಾಗಿದ್ದಾರೆ ಎನಿಸುತ್ತದೆ" ಎಂದು ಬ್ರೇಟ್ ಲೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ! "ವಿರಾಟ್ ಕೊಹ್ಲಿ ಮ್ಯಾಕ್ಸ್ವೆಲ್ ಅವರ ಏಕಾಗ್ರತೆಯನ್ನು ಮರಳುವಂತೆ ಮಾಡಿದ್ದಾರೆ. ಅವರ ಎದೆ ಬಡಿತವನ್ನು ಕಡಿಮೆಯಾಗುವಂತೆ ಮಾಡಿದ್ದಾರೆ. ಮ್ಯಾಕ್ಸ್ವೆಲ್ಗೆ ಕೊಹ್ಲಿ ಅತ್ಯುತ್ತಮ ಜೊತೆಗಾರನಾಗಿದ್ದಾರೆ. ಹೀಗಾಗಿ ಟೂರ್ನಿಯಲ್ಲಿ ಅತ್ಯುತ್ತಮ ಮನಸ್ಥಿತಿಯನ್ನು ಅವರು ವ್ಯಕ್ತಪಡಿಸಿದ್ದು ಟೂರ್ನಿಯನ್ನು ಅದ್ಭುತವಾಗಿ ಆರಂಭಿಸಿದ್ದಾರೆ" ಎಂದು ಮ್ಯಾಕ್ಸ್ವೆಲ್ ಮೇಲೆ ವಿರಾಟ್ ಕೊಹ್ಲಿ ಬೀರಿದ ಪರಿಣಾಮವನ್ನು ಬ್ರೇಟ್ ಲೀ ವಿವರಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 41 ಎಸೆತಗಳಲ್ಲಿ 59 ರನ್ ಬಾರಿಸಿ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ನೀಡಿದರು. ಎಂಎ ಚಿದಂಬರಂ ಸ್ಟೇಡಿಂನ ಕಠಿಣವಾದ ಪಿಚ್ನಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರರು ಶೀಘ್ರವಾಗಿ ವಿಕೆಟ್ ಕಳೆದುಕೊಂಡರೂ ಮ್ಯಾಕ್ಸ್ವೆಲ್ ಇನ್ನಿಂಗ್ಸ್ ತಂಡವ ಮೊತ್ತವನ್ನು ಉತ್ತಮಗೊಳಿಸಲು ಕಾರಣವಾಗಿತ್ತು.
ಗ್ಲೆನ್ ಮ್ಯಾಕ್ಸ್ವೆಲ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಬಾರಿಸಿದ ಅರ್ಧ ಶತಕ ಕಳೆದ ನಾಲ್ಕು ಆವೃತ್ತಿಗಳಲ್ಲಿ ಬಂದ ಮೊದಲ 50+ ರನ್ ಆಗಿದೆ. ಇದು ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ಬಾರಿಸಿದ ಕೇವಲ 7ನೇ ಅರ್ಧ ಶತಕವಾಗಿದೆ.
This News Article Is A Copy Of MYKHEL
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am