ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm