ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm