ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm