ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm