ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm