ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm