ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm