ಬ್ರೇಕಿಂಗ್ ನ್ಯೂಸ್
19-04-21 03:47 pm source: MYKHEL ಕ್ರೀಡೆ
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಆರ್ಸಿಬಿ ತಂಡದ ಬ್ಯಾಟ್ಸ್ಮನ್ ಗ್ಲೆನ್ ಮ್ಯಾಕ್ಸ್ವೆಲ್ ಪ್ರದರ್ಶನದ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ 78 ರನ್ ಬಾರಿಸಿದ ಮ್ಯಾಕ್ಸ್ವೆಲ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದರು.
ಈ ಬಾರಿಯ ಐಪಿಎಲ್ನಲ್ಲಿ ಎಲ್ಲರಿಗಿಂತ ಹೆಚ್ಚಿನ ಅಚ್ಚರಿಯನ್ನು ಮೂಡಿಸಿದ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಎಂದು ಸ್ವಾನ್ ಹೇಳಿದ್ದಾರೆ. ಇನ್ನು ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 14.25 ಕೋಟಿಗೆ ಹರಾಜಾದಾಗಲೂ ನನಗೆ ಅಚ್ಚರಿಯಾಗಿತ್ತು ಎಂದು ಗ್ಲೇಮ್ ಸ್ವಾನ್ ಹೇಳಿದ್ದಾರೆ.
32ರ ಹರೆಯದ ಗ್ಲೆನ್ ಮ್ಯಾಕ್ಸ್ವೆಲ್ ಆರ್ಸಿಬಿ ಪರವಾಗಿ ಆಡಿದ ಮೂರು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಭಾನುವಾರದ ಪಂದ್ಯದಲ್ಲಿ ಸತತ ಎರಡನೇ ಅರ್ಧ ಶತಕವನ್ನು ಸಿಡಿಸಿದರು. ಈ ಪ್ರದರ್ಶನದ ಕಾರಣದಿಂದ ಮೊದಲ ಎರಡು ಓವರ್ನಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದ ಆರ್ಸಿಬಿ ಮತ್ತೆ ಚೇತರಿಕೆ ಕಾಣಲು ಸಾಧ್ಯವಾಗಿದ್ದು ಮಾತ್ರವಲ್ಲದೆ ಬೃಹತ್ ಮೊತ್ತಕ್ಕೂ ಕಾರಣರಾದರು. "ಆತ ಎಲ್ಲರಿಗಿಂತ ಹೆಚ್ಚು ನನಗೆ ಅಚ್ಚರಿಗೊಳಿಸಿದ್ದಾನೆ.
ಆತನ ಮೇಲೆ ಅಷ್ಟು ಮೊತ್ತವನ್ನು ಹೂಡಿದಾಗ ಅದು ವ್ಯರ್ಥವಾದ ಮೊತ್ತ ಎಂದು ನಾನು ಭಾವಿಸಿದ್ದೆ. ಆದರೆ ಅವರು ಆತ ಮಧ್ಯಮ ಓವರ್ಗಳಲ್ಲಿ ಸ್ಟ್ರೈಕ್ರೇಟ್ ಹೆಚ್ಚಿಸಬಲ್ಲ ಎಂದು ಬೆಂಬಲಕ್ಕೆ ನಿಂತಿದ್ದರು" ಎಂದು ಗ್ಲೇಮ್ ಸ್ವಾನ್ ಹೇಳಿದ್ದಾರೆ.
ಇನ್ನು ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರಂತಾ ಆಟಗಾರರ ಉಪಸ್ಥಿತಿ ಮ್ಯಾಕ್ಸ್ವೆಲ್ಗೆ ಹೆಚ್ಚು ಸೂಕ್ತವಾಗುತ್ತದೆ, ಅವರ ಕಾರಣದಿಂದಾಗಿ ತನ್ನ ಸ್ವಾಭಾವಿಕ ಆಟವನ್ನು ಪ್ರದರ್ಶಿಸಲು ಮ್ಯಾಕ್ಸ್ವೆಲ್ಗೆ ಸಾಧ್ಯವಾಗುತ್ತದೆ ಎಂದು ಸ್ವಾನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm