ಬ್ರೇಕಿಂಗ್ ನ್ಯೂಸ್
19-04-21 04:23 pm source: MYKHEL ಕ್ರೀಡೆ
ಚೆನ್ನೈ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದಡಿಯಲ್ಲಿರುವ ಸಿಎಸ್ಕೆ ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡಿದೆ.
ಕಳೆದ ಬಾರಿ ಸಿಎಸ್ಕೆ ತಂಡದಲ್ಲಿ ಆಲ್ ರೌಂಡರ್ ಸುರೇಶ್ ರೈನಾ ಆಡಿರಲಿಲ್ಲ. ಈ ಬಾರಿ ಚೆನ್ನೈಗೆ ಬಲ ತುಂಬಲು ರೈನಾ ತಂಡ ಸೇರಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಸೀಸನ್ನಲ್ಲಿ ಸಿಎಸ್ಕೆ ತಂಡದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಕೂಡ ಇದ್ದಾರೆ.
ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್ಕೆ ಫ್ರಾಂಚೈಸಿ ಒಂದು ಮುದ್ದಾದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿತ್ತು. ರಾಬಿನ್ ಉತ್ತಪ್ಪ ಅವರ ಪುಟಾಣಿ ಪುತ್ರ ನೀಲ್ ನೋಲನ್ ಯೆಲ್ಲೋ ಆರ್ಮಿಯ ಜೆರ್ಸಿ ಹಾಕಿ ಬ್ಯಾಟ್ ಹಿಡಿದುಕೊಂಡಿದ್ದ ಚಿತ್ರವದು.
ಟ್ವಿಟರ್ನಲ್ಲಿ ಫೋಟೋ ಜೊತೆ 'ಸಿಂಹದ ಮರಿ ನೋಲನ್ಗೆ ವಿಶಿಲ್ ಹೊಡೆಯಿರಿ' ಎಂದು ಬರೆದುಕೊಳ್ಳಲಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವನ್ನು ಉತ್ತಪ್ಪ ಕೂಡ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹಾಕಿಕೊಂಡಿದ್ದಾರೆ. 'ಮಗನಿಗೆ ಜೆರ್ಸಿ ಇಷ್ಟವಾಗಿದೆ. ಆತ ಹೋದಲ್ಲೆಲ್ಲಾ ಇದನ್ನು ಕೊಂಡೊಯ್ಯುತ್ತಾನೆ' ಎಂದು ಉತ್ತಪ್ಪ ತನ್ನ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm