ಬ್ರೇಕಿಂಗ್ ನ್ಯೂಸ್
24-04-21 05:56 pm Source: MYKHEL ಕ್ರೀಡೆ
ಏಪ್ರಿಲ್ 24, 'ಗಾರ್ಡ್ ಆಫ್ ಕ್ರಿಕೆಟ್' ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ' ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.

ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ 'ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ 'ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್' ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್' ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm