ಬ್ರೇಕಿಂಗ್ ನ್ಯೂಸ್
24-04-21 05:56 pm Source: MYKHEL ಕ್ರೀಡೆ
ಏಪ್ರಿಲ್ 24, 'ಗಾರ್ಡ್ ಆಫ್ ಕ್ರಿಕೆಟ್' ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ' ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.

ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ 'ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ 'ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್' ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್' ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm