ಬ್ರೇಕಿಂಗ್ ನ್ಯೂಸ್
03-05-21 03:30 pm Source: MYKHEL Madhukara Shetty ಕ್ರೀಡೆ
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ರೌಂಡರ್ ತಿಸಾರ ಪೆರೆರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯವನ್ನು ಘೋಷಿಸಿದ್ದಾರೆ. ಈ ಮೂಲಕ ಲಂಕಾ ಕ್ರಿಕೆಟ್ ಪ್ರೇಮಿಗಳಿಗೆ ಪೆರೆರ ಆಘಾತವನ್ನು ನೀಡಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಈ ಅನುಭವಿ ಆಟಗಾರ 32ರ ಹರೆಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಸರಿಯುವ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿ ಮೂಡಿಸಿದೆ.
ಮೂಲಗಳ ಮಾಹಿತಿಯ ಪ್ರಕಾರ ತಿಸಾರ ಪೆರೆರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದ ಈ ಆಟಗಾರ 2009ರಲ್ಲಿ ಏಕದಿನ ಕ್ರಿಕೆಟ್ಗೆ, 2010ರಲ್ಲಿ ಟಿ20 ಹಾಗೂ 2011ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆಯನ್ನು ಮಾಡಿದ್ದಾರೆ.
ಒಟ್ಟು 8 ಟೆಸ್ಟ್ ಪಂದ್ಯಗಳಲ್ಲಿ ಶ್ರಿಲಂಕಾ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರುವ ಪೆರೆರ ಒಂದು ಅರ್ಧ ಶತಕದ ಸಹಿತ 203 ರನ್ಗಳಿಸಿದ್ದಾರೆ. 166 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2338 ರನ್ ಹಾಗೂ 175 ವಿಕೆಟ್ ಪಡೆದುಕೊಂಡಿದ್ದರೆ 84 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಿದ್ದು 1204 ರನ್ ಹಾಗೂ 51 ವಿಕೆಟ್ ಸಂಪಾದಿಸಿದ್ದಾರೆ.
ಐಪಿಎಲ್ನಲ್ಲಿಯೂ ಆಡಿದ ಅನುಭವ ಹೊಂದಿರುವ ಪೆರೆರಾ ಈ ಬಾರಿ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆಗೆ ಹೆಸರನ್ನು ನೊಂದಾಯಿಸಿದ್ದರು. 50 ಲಕ್ಷ ಮೂಲ ಬೆಲೆ ಹೊಂದಿದ್ದ ಪೆರೆರ ಅವರನ್ನು ಯಾವುದೇ ಫ್ರಾಂಚೈಸಿ ಕೊಂಡುಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಉಳಿದುಕೊಂಡಿದ್ದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಅನುಭವಿ ಆಟಗಾರರನ್ನು ಪರಿಗಣಿಸದಿರುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದೇ ಕಾರಣದಿಂದಾಗಿ ಪೆರೆರ ತಮ್ಮ ಅಂತಾರಾಷ್ಟ್ರೀಯ ನಿವೃತ್ತಿ ಘೋಷಣೆಯನ್ನು ಹಠಾತ್ ಆಗಿ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm