ಬ್ರೇಕಿಂಗ್ ನ್ಯೂಸ್
03-05-21 03:30 pm Source: MYKHEL Madhukara Shetty ಕ್ರೀಡೆ
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ರೌಂಡರ್ ತಿಸಾರ ಪೆರೆರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯವನ್ನು ಘೋಷಿಸಿದ್ದಾರೆ. ಈ ಮೂಲಕ ಲಂಕಾ ಕ್ರಿಕೆಟ್ ಪ್ರೇಮಿಗಳಿಗೆ ಪೆರೆರ ಆಘಾತವನ್ನು ನೀಡಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಈ ಅನುಭವಿ ಆಟಗಾರ 32ರ ಹರೆಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಸರಿಯುವ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿ ಮೂಡಿಸಿದೆ.
ಮೂಲಗಳ ಮಾಹಿತಿಯ ಪ್ರಕಾರ ತಿಸಾರ ಪೆರೆರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದ ಈ ಆಟಗಾರ 2009ರಲ್ಲಿ ಏಕದಿನ ಕ್ರಿಕೆಟ್ಗೆ, 2010ರಲ್ಲಿ ಟಿ20 ಹಾಗೂ 2011ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆಯನ್ನು ಮಾಡಿದ್ದಾರೆ.
ಒಟ್ಟು 8 ಟೆಸ್ಟ್ ಪಂದ್ಯಗಳಲ್ಲಿ ಶ್ರಿಲಂಕಾ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರುವ ಪೆರೆರ ಒಂದು ಅರ್ಧ ಶತಕದ ಸಹಿತ 203 ರನ್ಗಳಿಸಿದ್ದಾರೆ. 166 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2338 ರನ್ ಹಾಗೂ 175 ವಿಕೆಟ್ ಪಡೆದುಕೊಂಡಿದ್ದರೆ 84 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಿದ್ದು 1204 ರನ್ ಹಾಗೂ 51 ವಿಕೆಟ್ ಸಂಪಾದಿಸಿದ್ದಾರೆ.
ಐಪಿಎಲ್ನಲ್ಲಿಯೂ ಆಡಿದ ಅನುಭವ ಹೊಂದಿರುವ ಪೆರೆರಾ ಈ ಬಾರಿ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆಗೆ ಹೆಸರನ್ನು ನೊಂದಾಯಿಸಿದ್ದರು. 50 ಲಕ್ಷ ಮೂಲ ಬೆಲೆ ಹೊಂದಿದ್ದ ಪೆರೆರ ಅವರನ್ನು ಯಾವುದೇ ಫ್ರಾಂಚೈಸಿ ಕೊಂಡುಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಉಳಿದುಕೊಂಡಿದ್ದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಅನುಭವಿ ಆಟಗಾರರನ್ನು ಪರಿಗಣಿಸದಿರುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದೇ ಕಾರಣದಿಂದಾಗಿ ಪೆರೆರ ತಮ್ಮ ಅಂತಾರಾಷ್ಟ್ರೀಯ ನಿವೃತ್ತಿ ಘೋಷಣೆಯನ್ನು ಹಠಾತ್ ಆಗಿ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm