ಬ್ರೇಕಿಂಗ್ ನ್ಯೂಸ್
05-05-21 04:51 pm Source: MYKHEL Madhukara Shetty ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಅಮಾನತಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಗೆ ಹೊರಡಲು ಸಜ್ಜಾಗಿದ್ದಾರೆ. ಹೊರಡುವ ಮುನ್ನ ರಾಜಸ್ಥಾನ್ ರಾಯಲ್ಸ್ ಪರ ಆಡುವ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ಭಾರತದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಒಂದೆರಡು ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದರು. ಬಟ್ಲರ್ ಟೂರ್ನಿ ಆರಂಭದಲ್ಲಿ ಅಂಥ ಬ್ಯಾಟಿಂಗ್ ಪ್ರದರ್ಶನ ನೀಡಿರದಿದ್ದರೂ ಮೇ 2ರಂದು ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ನೀಡಿದ್ದರು. ಕೇವಲ 64 ಎಸೆತಗಳಲ್ಲಿ 124 ರನ್ ಕೊಡುಗೆ ನೀಡಿದ್ದರು. ಈ ಪಂದ್ಯದಲ್ಲಿ ಬಟ್ಲರ್-ಜೈಸ್ವಾಲ್ ಆರಂಭಿಕರಾಗಿ ಆಡಿದ್ದರು.
ಅಂದು ಶತಕ ಬಾರಿಸಿದ್ದ ಬ್ಯಾಟನ್ನು ಬಟ್ಲರ್, ಯುವ ಬ್ಯಾಟ್ಸ್ಮನ್ ಯಶಸ್ವಿಗೆ ಉಡಿಗೊರೆಯಾಗಿ ನೀಡಿದ್ದಾರೆ. ಆಂಗ್ಲ ಆಟಗಾರನಿಗೆ ಭಾರತೀಯ ಆಟಗಾರನ ಮೇಲಿರುವ ಪ್ರೀತಿಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಈ ಯಶಸ್ವಿ ಜೈಸ್ವಾಲ್ ಬಡ ಕುಟುಂಬದಿಂದ ಬಂದ ಪ್ರತಿಭಾನ್ವಿತ ಆಟಗಾರ.
ಬ್ಯಾಟ್ನ ಮೇಲೆ, 'ಎಂಜಾಯ್ ಯುವರ್ ಟ್ಯಾಲೆಂಟ್. ಬಸ್ಟ್ ವಿಶಸ್' ಎಂದು ಆಟೋಗ್ರಾಫ್ ಕೂಡ ಬರೆದಿರುವ ಬಟ್ಲರ್, ಆ ಬ್ಯಾಟನ್ನು ಯಶಸ್ವಿಗೆ ನೀಡಿದ್ದಾರೆ. ಈ ಚಿತ್ರವನ್ನು ರಾಜಸ್ಥಾನ್ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ಪೋಸ್ಟ್ನ ಜೊತೆಗೆ 'ವಿಶೇಷ ಓಪನಿಂಗ್ ಪಾರ್ಟ್ನರ್ನಿಂದ ವಿಶೇಷ ಉಡುಗೊರೆ' ಎಂದು ಆರ್ಆರ್ ಸಾಲ್ಲನ್ನೂ ಬರೆದುಕೊಂಡಿದೆ.
This News Article Is A Copy Of MYKHEL
A special gift from a special opening partner. 💓#HallaBol | #RoyalsFamily | @yashasvi_j | @josbuttler pic.twitter.com/VE3QIE0kct
— Rajasthan Royals (@rajasthanroyals) May 4, 2021
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm