ಬ್ರೇಕಿಂಗ್ ನ್ಯೂಸ್
05-05-21 04:51 pm Source: MYKHEL Madhukara Shetty ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಅಮಾನತಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಗೆ ಹೊರಡಲು ಸಜ್ಜಾಗಿದ್ದಾರೆ. ಹೊರಡುವ ಮುನ್ನ ರಾಜಸ್ಥಾನ್ ರಾಯಲ್ಸ್ ಪರ ಆಡುವ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ಭಾರತದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಒಂದೆರಡು ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದರು. ಬಟ್ಲರ್ ಟೂರ್ನಿ ಆರಂಭದಲ್ಲಿ ಅಂಥ ಬ್ಯಾಟಿಂಗ್ ಪ್ರದರ್ಶನ ನೀಡಿರದಿದ್ದರೂ ಮೇ 2ರಂದು ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ನೀಡಿದ್ದರು. ಕೇವಲ 64 ಎಸೆತಗಳಲ್ಲಿ 124 ರನ್ ಕೊಡುಗೆ ನೀಡಿದ್ದರು. ಈ ಪಂದ್ಯದಲ್ಲಿ ಬಟ್ಲರ್-ಜೈಸ್ವಾಲ್ ಆರಂಭಿಕರಾಗಿ ಆಡಿದ್ದರು.
ಅಂದು ಶತಕ ಬಾರಿಸಿದ್ದ ಬ್ಯಾಟನ್ನು ಬಟ್ಲರ್, ಯುವ ಬ್ಯಾಟ್ಸ್ಮನ್ ಯಶಸ್ವಿಗೆ ಉಡಿಗೊರೆಯಾಗಿ ನೀಡಿದ್ದಾರೆ. ಆಂಗ್ಲ ಆಟಗಾರನಿಗೆ ಭಾರತೀಯ ಆಟಗಾರನ ಮೇಲಿರುವ ಪ್ರೀತಿಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಈ ಯಶಸ್ವಿ ಜೈಸ್ವಾಲ್ ಬಡ ಕುಟುಂಬದಿಂದ ಬಂದ ಪ್ರತಿಭಾನ್ವಿತ ಆಟಗಾರ.
ಬ್ಯಾಟ್ನ ಮೇಲೆ, 'ಎಂಜಾಯ್ ಯುವರ್ ಟ್ಯಾಲೆಂಟ್. ಬಸ್ಟ್ ವಿಶಸ್' ಎಂದು ಆಟೋಗ್ರಾಫ್ ಕೂಡ ಬರೆದಿರುವ ಬಟ್ಲರ್, ಆ ಬ್ಯಾಟನ್ನು ಯಶಸ್ವಿಗೆ ನೀಡಿದ್ದಾರೆ. ಈ ಚಿತ್ರವನ್ನು ರಾಜಸ್ಥಾನ್ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ಪೋಸ್ಟ್ನ ಜೊತೆಗೆ 'ವಿಶೇಷ ಓಪನಿಂಗ್ ಪಾರ್ಟ್ನರ್ನಿಂದ ವಿಶೇಷ ಉಡುಗೊರೆ' ಎಂದು ಆರ್ಆರ್ ಸಾಲ್ಲನ್ನೂ ಬರೆದುಕೊಂಡಿದೆ.
This News Article Is A Copy Of MYKHEL
A special gift from a special opening partner. 💓#HallaBol | #RoyalsFamily | @yashasvi_j | @josbuttler pic.twitter.com/VE3QIE0kct
— Rajasthan Royals (@rajasthanroyals) May 4, 2021
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm