ಬ್ರೇಕಿಂಗ್ ನ್ಯೂಸ್
11-05-21 04:37 pm MYKHEL: Srinivasa A ಕ್ರೀಡೆ
ಕೊರೊನಾವೈರಸ್ ಕೇವಲ ಭಾರತ ಮಾತ್ರವಲ್ಲದೆ ವಿಶ್ವದ ಹಲವಾರು ದೇಶಗಳನ್ನು ಕಾಡುತ್ತಿದೆ. ಇತ್ತೀಚೆಗಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ ಬಯೋಬಬಲ್ ಒಳಗೂ ಸಹ ಕೊರೊನಾವೈರಸ್ ಪ್ರವೇಶಿಸಿದ ಕಾರಣ ಪ್ರಸ್ತುತ ಟೂರ್ನಿಯನ್ನು ಮುಂದೂಡಿರುವುದಾಗಿ ಬಿಸಿಸಿಐ ತಿಳಿಸಿತ್ತು. ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ಕೈಗೊಂಡಿತ್ತು.
ಇದಕ್ಕೂ ಮುನ್ನ ಮಾರ್ಚ್ ತಿಂಗಳಿನಲ್ಲಿ ಪಾಕಿಸ್ತಾನದ 6ನೇ ಆವೃತ್ತಿಯ ಪಾಕಿಸ್ತಾನ್ ಸೂಪರ್ ಲೀಗ್ ಕೂಡ ಇದೇ ಮಾದರಿಯಲ್ಲಿ ಮುಂದೂಡಲ್ಪಟ್ಟಿತ್ತು. ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿದ್ದ 6 ಕ್ರಿಕೆಟಿಗರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿತ್ತು. ಹೀಗೆ ಐಪಿಎಲ್ ಮಾದರಿಯಲ್ಲಿಯೇ ಮಾರ್ಚ್ ತಿಂಗಳಲ್ಲಿ ಪಿಎಸ್ಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.
ಹೀಗೆ ಮುಂದೂಡಲ್ಪಟ್ಟಿದ್ದ ಪಿಎಸ್ಎಲ್ ಟೂರ್ನಿಯನ್ನು ಜೂನ್ 1ರಿಂದ ಯುಎಇಯಲ್ಲಿ ಮುಂದುವರೆಸಲು ಪಿಸಿಬಿ ಚಿಂತನೆ ನಡೆಸಿತ್ತು. ಪಿಎಸ್ಎಲ್ ಟೂರ್ನಿಯ ಉಳಿದ 20 ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಚರ್ಚೆಗಳು ಆರಂಭವಾಗುತ್ತಿದ್ದಂತೆಯೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. 'ಇದು ಕ್ರಿಕೆಟ್ ಆಡುವ ಸಮಯವಲ್ಲ, ಜೀವ ಉಳಿಸುವ ಸಮಯ. ಸೊಂಕು ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಕ್ರಿಕೆಟ್ ಆಡುವುದರ ಬದಲು ಜೀವಗಳನ್ನು ಉಳಿಸುವ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು. ಇಡೀ ಪ್ರಪಂಚವೇ ಕೊರೊನಾವೈರಸ್ನಿಂದ ತೊಂದರೆಗೊಳಗಾಗಿದ್ದು, ಟಿ ಟ್ವೆಂಟಿ ವಿಶ್ವಕಪ್ ನಡೆಯಬೇಕಿದ್ದ ಭಾರತವೂ ಕೂಡ ಕೊರೊನಾ ಹೊಡೆತಕ್ಕೆ ಸಿಲುಕಿದೆ' ಎಂದು ಜಾವೇದ್ ಮಿಯಾಂದಾದ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಹಾಗೂ ಪಿಎಸ್ಎಲ್ ಮುಂದುವರೆಸುವ ನಿರ್ಧಾರವನ್ನು ಕೈಗೊಂಡ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ವಿರುದ್ಧ ಜಾವೇದ್ ಮಿಯಾಂದಾದ್ ಆಕ್ರೋಶ ವ್ಯಕ್ತಪಡಿಸಿದರು. 'ಅವರು ದುಡ್ಡು ಮಾಡಿಕೊಳ್ಳುವುದಕ್ಕೋಸ್ಕರ ಹಲವಾರು ಜನರ ಜೀವವನ್ನು ಒತ್ತೆ ಇಡುತ್ತಿದ್ದಾರೆ. ಒಂದುವೇಳೆ ನಾನೇನಾದರೂ ಪಿಎಸ್ಎಲ್ ಆಯೋಜಕನಾಗಿದ್ದರೆ ಇಂತಹ ನಿರ್ಧಾರವನ್ನು ಕೈಗೊಳ್ಳುತ್ತಿರಲಿಲ್ಲ. ಅವರು ಯೋಜಿಸಿರುವಂತೆ ಪಿಎಸ್ಎಲ್ ಪಂದ್ಯಗಳನ್ನು ನಡೆಸಿ ಯಾರಿಗಾದರೂ ತೊಂದರೆಯಾದರೆ ಯಾರು ಜವಾಬ್ದಾರಿಯನ್ನು ಹೊರುತ್ತಾರೆ?' ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ವಿರುದ್ಧ ಜಾವೇದ್ ಮಿಯಾಂದಾದ್ ಕಿಡಿಕಾರಿದರು.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm