ಬ್ರೇಕಿಂಗ್ ನ್ಯೂಸ್
11-05-21 04:37 pm MYKHEL: Srinivasa A ಕ್ರೀಡೆ
ಕೊರೊನಾವೈರಸ್ ಕೇವಲ ಭಾರತ ಮಾತ್ರವಲ್ಲದೆ ವಿಶ್ವದ ಹಲವಾರು ದೇಶಗಳನ್ನು ಕಾಡುತ್ತಿದೆ. ಇತ್ತೀಚೆಗಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ ಬಯೋಬಬಲ್ ಒಳಗೂ ಸಹ ಕೊರೊನಾವೈರಸ್ ಪ್ರವೇಶಿಸಿದ ಕಾರಣ ಪ್ರಸ್ತುತ ಟೂರ್ನಿಯನ್ನು ಮುಂದೂಡಿರುವುದಾಗಿ ಬಿಸಿಸಿಐ ತಿಳಿಸಿತ್ತು. ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ಕೈಗೊಂಡಿತ್ತು.
ಇದಕ್ಕೂ ಮುನ್ನ ಮಾರ್ಚ್ ತಿಂಗಳಿನಲ್ಲಿ ಪಾಕಿಸ್ತಾನದ 6ನೇ ಆವೃತ್ತಿಯ ಪಾಕಿಸ್ತಾನ್ ಸೂಪರ್ ಲೀಗ್ ಕೂಡ ಇದೇ ಮಾದರಿಯಲ್ಲಿ ಮುಂದೂಡಲ್ಪಟ್ಟಿತ್ತು. ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿದ್ದ 6 ಕ್ರಿಕೆಟಿಗರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿತ್ತು. ಹೀಗೆ ಐಪಿಎಲ್ ಮಾದರಿಯಲ್ಲಿಯೇ ಮಾರ್ಚ್ ತಿಂಗಳಲ್ಲಿ ಪಿಎಸ್ಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.
ಹೀಗೆ ಮುಂದೂಡಲ್ಪಟ್ಟಿದ್ದ ಪಿಎಸ್ಎಲ್ ಟೂರ್ನಿಯನ್ನು ಜೂನ್ 1ರಿಂದ ಯುಎಇಯಲ್ಲಿ ಮುಂದುವರೆಸಲು ಪಿಸಿಬಿ ಚಿಂತನೆ ನಡೆಸಿತ್ತು. ಪಿಎಸ್ಎಲ್ ಟೂರ್ನಿಯ ಉಳಿದ 20 ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಚರ್ಚೆಗಳು ಆರಂಭವಾಗುತ್ತಿದ್ದಂತೆಯೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. 'ಇದು ಕ್ರಿಕೆಟ್ ಆಡುವ ಸಮಯವಲ್ಲ, ಜೀವ ಉಳಿಸುವ ಸಮಯ. ಸೊಂಕು ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಕ್ರಿಕೆಟ್ ಆಡುವುದರ ಬದಲು ಜೀವಗಳನ್ನು ಉಳಿಸುವ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು. ಇಡೀ ಪ್ರಪಂಚವೇ ಕೊರೊನಾವೈರಸ್ನಿಂದ ತೊಂದರೆಗೊಳಗಾಗಿದ್ದು, ಟಿ ಟ್ವೆಂಟಿ ವಿಶ್ವಕಪ್ ನಡೆಯಬೇಕಿದ್ದ ಭಾರತವೂ ಕೂಡ ಕೊರೊನಾ ಹೊಡೆತಕ್ಕೆ ಸಿಲುಕಿದೆ' ಎಂದು ಜಾವೇದ್ ಮಿಯಾಂದಾದ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಹಾಗೂ ಪಿಎಸ್ಎಲ್ ಮುಂದುವರೆಸುವ ನಿರ್ಧಾರವನ್ನು ಕೈಗೊಂಡ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ವಿರುದ್ಧ ಜಾವೇದ್ ಮಿಯಾಂದಾದ್ ಆಕ್ರೋಶ ವ್ಯಕ್ತಪಡಿಸಿದರು. 'ಅವರು ದುಡ್ಡು ಮಾಡಿಕೊಳ್ಳುವುದಕ್ಕೋಸ್ಕರ ಹಲವಾರು ಜನರ ಜೀವವನ್ನು ಒತ್ತೆ ಇಡುತ್ತಿದ್ದಾರೆ. ಒಂದುವೇಳೆ ನಾನೇನಾದರೂ ಪಿಎಸ್ಎಲ್ ಆಯೋಜಕನಾಗಿದ್ದರೆ ಇಂತಹ ನಿರ್ಧಾರವನ್ನು ಕೈಗೊಳ್ಳುತ್ತಿರಲಿಲ್ಲ. ಅವರು ಯೋಜಿಸಿರುವಂತೆ ಪಿಎಸ್ಎಲ್ ಪಂದ್ಯಗಳನ್ನು ನಡೆಸಿ ಯಾರಿಗಾದರೂ ತೊಂದರೆಯಾದರೆ ಯಾರು ಜವಾಬ್ದಾರಿಯನ್ನು ಹೊರುತ್ತಾರೆ?' ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ವಿರುದ್ಧ ಜಾವೇದ್ ಮಿಯಾಂದಾದ್ ಕಿಡಿಕಾರಿದರು.
(Kannada Copy of Mykhel Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm