ಬ್ರೇಕಿಂಗ್ ನ್ಯೂಸ್
11-05-21 04:42 pm MYKHEL: Srinivasa A ಕ್ರೀಡೆ
ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಹಾಗೂ ಇನ್ನೂ ಹಲವು ಟೂರ್ನಿಗಳ ಮೇಲಿದೆ. ಬಿಸಿಸಿಐ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ 5ವಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ.
ಜೂನ್ 18ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನ್ಯೂಜಿಲೆಂಡ್ ವಿರುದ್ಧ ನಡೆದರೆ, ಆಗಸ್ಟ್ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಎರಡೂ ಕೂಡ ಇಂಗ್ಲೆಂಡ್ನಲ್ಲಿಯೇ ನಡೆಯಲಿದೆ. ಇದರ ನಡುವೆ ಜುಲೈ ತಿಂಗಳಿನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಳ್ಳಲಿದೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಆಟಗಾರರ ಬದಲು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಕೆಲವೊಂದಿಷ್ಟು ಭಾರತೀಯ ಆಟಗಾರರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಬಿಸಿಸಿಐ ಆಯ್ಕೆ ಮಾಡಲಿದೆ.
ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ, ಭುವನೇಶ್ವರ್ ಕುಮಾರ್ ಹಾಗೂ ಸಂಜು ಸ್ಯಾಮ್ಸನ್ ಸೇರಿದಂತೆ ಇನ್ನೂ ಹಲವಾರು ಆಟಗಾರರನ್ನೊಳಗೊಂಡ ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ ಬಿಸಿಸಿಐ ಕಳುಹಿಸಲಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಶ್ರೀಲಂಕಾ ಪ್ರವಾಸಕ್ಕೆ ಅಲಭ್ಯರಾಗುವ ಕಾರಣದಿಂದ ಈ ತಂಡಕ್ಕೆ ಯಾವ ಆಟಗಾರನನ್ನು ನಾಯಕನನ್ನಾಗಿ ನೇಮಿಸುತ್ತಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ಕುರಿತು ಮಾಜಿ ಕ್ರಿಕೆಟಿಗ ರೀತಿಂದರ್ ಸಿಂಗ್ ಸೋಧಿ ಪ್ರತಿಕ್ರಿಯಿಸಿದ್ದು ಹಾರ್ದಿಕ್ ಪಾಂಡ್ಯ ಅನುಭವಿ ಆಟಗಾರನಾಗಿದ್ದು ಅವರನ್ನೇ ಲಂಕಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ನಾಯಕನನ್ನಾಗಿ ನೇಮಿಸಬೇಕು ಎಂದಿದ್ದಾರೆ.
ಲಂಕಾ ವಿರುದ್ಧದ ಸರಣಿಗಳ ವಿವರ : ಭಾರತ ಮತ್ತು ಶ್ರೀಲಂಕಾ ನಡುವೆ 3 ಏಕದಿನ ಪಂದ್ಯಗಳು ಜುಲೈ 13, 16 ಹಾಗೂ 19ರಂದು ಮತ್ತು 3 ಟಿ ಟ್ವೆಂಟಿ ಪಂದ್ಯಗಳು ಜುಲೈ 22, 24 ಹಾಗೂ 27ರಂದು ನಡೆಯಲಿದ್ದು, ಎಲ್ಲಾ ಪಂದ್ಯಗಳು ಸಹ ಕೊಲಂಬೊನ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯಲಿವೆ.
(Kannada Copy of Mykhel Kannada)
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm