ಬ್ರೇಕಿಂಗ್ ನ್ಯೂಸ್
13-05-21 11:12 am MYKHEL: Madhukara Shetty ಕ್ರೀಡೆ
ಕಳೆದ 13 ಆವೃತ್ತಿಯ ಐಪಿಎಲ್ನಲ್ಲಿಯೂ ನಿರಾಸೆಯನ್ನು ಅನುಭವಿಸಿಕೊಂಡು ಬಂದಿದ್ದ ಆರ್ಸಿಬಿ ತಂಡ ಈ ಬಾರಿ ಆರಂಭದಿಂದಲೂ ಅದ್ಭುತ ಪ್ರದರ್ಶನವನ್ನು ನೀಡಿಕೊಂಡು ಮುನ್ನುಗ್ಗಿತ್ತು. ಬಲಿಷ್ಠ ತಂಡಗಳಿಗೆ ಸೋಲುಣಿಸುತ್ತಾ ಎಲ್ಲಾ ವಿಭಾಗದಲ್ಲಿಯೂ ಮಿಂಚುತ್ತಾ ಸಾಗಿತ್ತು, ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಟೂರ್ನಿಯನ್ನು ಮುಂದೂಡಬೇಕಾಯಿತು. ಹೀಗಾಗಿ ಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಗಿದೆ.
ಆದರೆ ಈಗ ಆರ್ಸಿಬಿ ಅಭಿಮಾನಿಗಳು ಸಂತಸಪಡುವ ಸುದ್ದಿಯೊಂದು ಬಂದಿದೆ. ಪೈಥಾನ್ ಸಿಮ್ಯೂಲೇಶನ್ ಪ್ರೋಗ್ರಾಮ್ ಮೂಲಕ ಈ ಟೂರ್ನಿಯ ಫಲಿತಾಂಶವನ್ನು ಕಂಡುಕೊಳ್ಳಲಾಗಿದ್ದು ಆರ್ಸಿಬಿ ಟೂರ್ನಿಯ ವಿಜೇತ ತಂಡ ಎಂಬ ಫಲಿತಾಂಶ ಬಂದಿದೆ.

ಆರ್ಸಿಬಿ ಪರ ಫಲಿತಾಂಶ
ಈ ಬಾರಿಯ ಐಪಿಎಲ್ನ 29 ಪಂದ್ಯಗಳು ಮಾತ್ರವೇ ಸಂಪೂರ್ಣವಾಗಿದೆ. ಉಳಿದ 31 ಪಂದ್ಯಗಳ ಆಯೋಜನೆ ಇನ್ನಷ್ಟೇ ಆಗಬೇಕಿದೆ. ಆದರೆ ಈಗಾಗಲೇ ನಡೆದಿರುವ ಪಂದ್ಯಗಳ ಫಲಿತಾಂಶವನ್ನು ಆಧರಿಸಿ ಅದರ ಲೆಕ್ಕಾಚಾರದ ಪ್ರಕಾರವೇ ಪ್ರತಿ ಪಂದ್ಯಗಳ ಫಲಿತಾಂಶವನ್ನು ಕಲೆ ಹಾಕಿ ಈ ರೆಡ್ಡಿಟ್ ಬಳಕೆದಾರ ಆದಿಶ್ ಜೈನ್ ಎಂಬವರು ಪ್ರೋಗ್ರಾಂ ಮಾಡಲು ನಿರ್ಧಾರಿಸಿದರು. ಇದರ ಫಲಿತಾಂಶ ಆರ್ಸಿಬಿ ಪರವಾಗಿದ್ದು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ವಿಜೇತ ತಂಡ ಎಂದು ಘೋಷಿಸಿದೆ.

ಫಲಿತಾಂಶ ಪಡಿದಿದ್ದು ಹೇಗೆ!
ಈ ಫಲಿತಾಂಶವನ್ನು ಪಡೆಯುವ ಸಲುವಾಗಿ ಕಳೆದ ಐದು ವರ್ಷಗಳ ಪ್ರತಿ ಎಸೆತಗಳ ಅಂಕಿಅಂಶಗಳನ್ನು ಬಳಸಲಾಗಿದೆ. ಪ್ರತಿ ಆಟಗಾರನಿಗೂ ವಿಶೇಷ ಗುರುತು ನೀಡಲಾಗಿದ್ದು ಸಿಂಗಲ್ಸ್, ಡಬಲ್ಸ್ ರನ್ಗಳಿಸಿದ ಮಾದರಿ, ಸಿಕ್ಸ್ ಬೌಂಡರಿ ಗಳಿಸಿದ ವಿವರಗಳು ಇತ್ಯಾದಿಯನ್ನು ನೀಡಲಾಗಿದೆ. ಜೊತೆಗೆ ಔಟಾದ ವಿಧಾನವನ್ನು ಬಳಸಿಕೊಂಡು ಈ ಫಲಿತಾಂಶವನ್ನು ಪಡೆಯಲಾಗಿದೆ ಎಂದು ಆದಿಶ್ ಜೈನ್ ವಿವರಿಸಿದ್ದಾರೆ.

ಫೈನಲ್ನಲ್ಲಿ ಡೆಲ್ಲಿ ವಿರುದ್ಧ ಗೆಲುವು
ಈ ಫಲಿತಾಂಶದ ಪ್ರಕಾರ ಮೊದಲ ಕ್ವಾಲಿಫೈಯರ್ನಲ್ಲಿ ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣೆಸಿದರೆ ಮೊದಲ ಎಲಿಮಿನೇಟರ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಕ್ವಾಲಿಫೈಯರ್ ಎರಡರಲ್ಲಿ ಡೆಲ್ಲಿ ಹಾಗೂ ಪಂಜಾಬ್ ಮುಖಾಮುಖಿಯಾಗಿ ಬಳಿಕ ಫೈನಲ್ ಪಂದ್ಯದಲ್ಲಿ ಡೆಲ್ಲಿ ಹಾಗೂ ಆರ್ಸಿಬಿ ತಂಡಗಳು ಮುಖಾಮುಖಿಯಾಗಿದ್ದು ಆರ್ಸಿಬಿ ಗೆಲುವು ಸಾಧಿಸಿರುವ ಫಲಿತಾಂಶ ಪ್ರಕಟವಾಗಿದೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm