ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm