ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm