ಬ್ರೇಕಿಂಗ್ ನ್ಯೂಸ್
20-05-21 04:12 pm MYKHEL: Srinivasa A ಕ್ರೀಡೆ
ಜೂನ್ 18ರಿಂದ ಇಂಗ್ಲೆಂಡ್ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಸೆಣಸಾಡಲಿದೆ ಹಾಗೂ ಇಂಗ್ಲೆಂಡ್ನಲ್ಲಿಯೇ ಉಳಿದುಕೊಂಡು ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಈಗಾಗಲೇ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಇದೇ ಸಮಯದಲ್ಲಿ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳನ್ನು ಆಯೋಜಿಸಲಾಗಿದ್ದು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಆಟಗಾರರನ್ನು ಬಿಟ್ಟು ಉಳಿದ ಸ್ಟಾರ್ ಆಟಗಾರರ ತಂಡವೊಂದನ್ನು ಕಟ್ಟಿ ಲಂಕಾ ಪ್ರವಾಸಕ್ಕೆ ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ. ಇನ್ನು ಈ ಪ್ರವಾಸದ ವಿಶೇಷತೆ ಏನೆಂದರೆ ರಾಹುಲ್ ದ್ರಾವಿಡ್ ಮಾರ್ಗದರ್ಶನ. ಹೌದು ರಾಹುಲ್ ದ್ರಾವಿಡ್ ಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ತಂಡದ ಕೋಚ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ.
ಟೀಮ್ ಇಂಡಿಯಾದ ಕೋಚ್ಗಳಾದ ರವಿಶಾಸ್ತ್ರಿ, ಭರತ್ ಅರುಣ್ ಹಾಗೂ ವಿಕ್ರಂ ರಾಥೋರ್ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಕಾರಣ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಕೋಚ್ ಆಗಿ ತೆರಳಲಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಎ ತಂಡಕ್ಕೆ ಮಾರ್ಗದರ್ಶನವನ್ನು ನೀಡಿರುವ ಅನುಭವವಿರುವ ರಾಹುಲ್ ದ್ರಾವಿಡ್ ಅಂಡರ್- 19 ತಂಡಕ್ಕೂ ಸಹ ಕೋಚಿಂಗ್ ನೀಡಿದ್ದಾರೆ. ಹೀಗಾಗಿ ಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಯುವ ಆಟಗಾರರಿಗೆ ದ್ರಾವಿಡ್ ಮಾರ್ಗದರ್ಶನದ ಅನುಭವ ಮೊದಲೇ ಇರುವುದರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅಂಡರ್-19 ತಂಡದಲ್ಲಿ ಈಗಾಗಲೇ ಹಲವಾರು ಯುವಪ್ರತಿಭೆಗಳನ್ನು ತಯಾರಿಸಿರುವ ದ್ರಾವಿಡ್ ಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ತಂಡವನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎನ್ನಲಾಗುತ್ತಿದೆ.
(Kannada Copy of Mykhel Kannada)
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm