ಬ್ರೇಕಿಂಗ್ ನ್ಯೂಸ್
31-05-21 10:52 am MYKHEL: Sadashiva ಕ್ರೀಡೆ
ದುಬೈ: ದುಬೈನನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಹಾಲಿ ಚಾಂಪಿಯನ್, ಭಾರತದ ಪೂಜಾ ರಾಣಿ (75 ಕೆಜಿ ವಿಭಾಗ) ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು 6 ಬಾರಿಯ ವಿಶ್ವಚಾಂಪಿಯನ್ ಮೇರಿ ಕೋಮ್ (51 ಕೆಜಿ) ಸೇರಿ ಮೂವರು ಭಾರತೀಯ ಬಾಕ್ಸರ್ಗಳಿಗೆ ಬೆಳ್ಳಿಯ ಪದಕ ಲಭಿಸಿದೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿರುವ ಪೂಜಾ ರಾಣಿ ಉಜ್ಬೇಕಿಸ್ತಾನ್ನ ಮಾವ್ಲುಡಾ ಮೊವ್ಲೋನೋವಾ ವಿರುದ್ಧ ರೋಚಕ ಕದನದಲ್ಲಿ ಚಿನ್ನ ಗೆದ್ದರು. ಚಿನ್ನದ ಪದಕದ ಈ ಗುದ್ದಾಟಕ್ಕೆ ಪೂಜಾ 10,000 ಡಾಲರ್ (72,41,050 ರೂ.) ನಗದು ಪುರಸ್ಕಾರ ಜಯಿಸಿದ್ದಾರೆ.
ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರು ಕಝಕೀಸ್ತಾನ್ನ ನಾಜಿಮ್ ಕಿಜೈಬೇ ವಿರುದ್ಧ 2-3ರ ಹಿನ್ನಡೆ ಅನುಭವಿಸಿದರು. ಆದರೆ ಮಣಿಪುರದ ಬಾಕ್ಸರ್ಗೆ ಇದು ವಿಶ್ವ ಮಟ್ಟದ ಟೂರ್ನಿಯಲ್ಲಿ ಲಭಿಸಿದ 7ನೇ ಪದಕವಾಗಿ ದಾಖಲೆ ನಿರ್ಮಿಸಿದೆ.
ಚೊಚ್ಚಲ ಬಾರಿಗೆ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡಿದ್ದ ಲಾಲ್ಬುತ್ಸೈಹಿ (64 ಕೆಜಿ), ಕಝಕೀಸ್ತಾನ್ನ ಮಿಲಾನಾ ಸಫ್ರೊನೊವಾ ವಿರುದ್ಧ ಸೋತರೆ, ಅನುಪಮಾ (81+ ಕೆಜಿ) ಕಝಕೀಸ್ತಾನ್ನ ಲಜತ್ ಕುಂಗೀಬಾಯೇವಾ ಎದುರು ಪರಾಭವಗೊಂಡು ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ.
(Kannada Copy of MYKHEL Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm