ಬ್ರೇಕಿಂಗ್ ನ್ಯೂಸ್
02-06-21 02:40 pm MYKHEL: Srinivasa A ಕ್ರೀಡೆ
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am