ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm