ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
31-08-25 07:17 pm
HK News Desk
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 10:34 pm
Mangalore Correspondent
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
31-08-25 10:55 pm
Mangalore Correspondent
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm