ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am