ಬ್ರೇಕಿಂಗ್ ನ್ಯೂಸ್
29-06-21 04:03 pm MYKHEL: Madhukara Shetty ಕ್ರೀಡೆ
ಭಾರತದ ಸ್ಟಾರ್ ಆರ್ಚರ್ ದೀಪಿಕಾ ಕುಮಾರಿ ಮತ್ತೊಂದು ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಆರ್ಚರಿ ವಿಶ್ವಕಪ್ನಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದಿರುವ ದೀಪಿಕಾ ಕುಮಾರಿ ಈಗ ಜಾಗತಿಕ ರ್ಯಾಂಕಿಂಗ್ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ. ಈ ಮೂಲಕ 2012ರ ನಂತರ ಮೊದಲ ಬಾರಿಗೆ ಈ ಸಾಧನೆ ಮಾಡಿದ್ದಾರೆ.
ಭಾನುವಾರ ದೀಪಿಕಾ ಕುಮಾರಿ ಮೂರು ರಿಕ್ಯೂರ್ವ್ ವಿಭಾಗಗಳಲ್ಲಿ ಚಿನ್ನವನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ತಂಡ, ವೈಯಕ್ತಿಕ ಹಾಗೂ ಮಿಕ್ಸ್ಡ್ ಜೋಡಿ ವಿಭಾಗದಲ್ಲಿ ದೀಪಿಕಾ ಗೆಲುವು ಸಾಧಿಸಿದ್ದರು. ಈ ಮೂಲಕ ಭಾರತ ತಂಡದ ಪರವಾಗಿ ವಿಶೇಷ ಸಾಧನೆಯನ್ನು ದೀಪಿಕಾ ಮಾಡಿದ್ದಾರೆ.

ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಗೋಲ್ ದಾಖಲೆ ಮುರಿದ ಲಿಯೋನೆಲ್ ಮೆಸ್ಸಿ ವಿಶೇಷವೆಂದರೆ ದೀಪಿಕಾ ಕುಮಾರಿ ಭಾನುವಾರ ಕೇವಲ 5 ಗಂಟೆಗಳ ಅಂತರದಲ್ಲಿ ಮೂರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಿಕ್ಯೂರ್ವ್ ವಿಭಾಗದಲ್ಲಿ ಭಾರತ ಕ್ಲೀನ್ಸ್ವೀಪ್ ಸಾಧನೆ ಮಾಡಲು ಸಾಧ್ಯವಾಗಿತ್ತು. ಈ ಫಾರ್ಮ್ಅನ್ನು ತಾನು ಮುಂದುವರಿಸುವ ವಿಶ್ವಾಸವನ್ನು ದೀಪಿಕಾ ಕುಮಾರಿ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಆರ್ಚರಿ ವಿಶ್ವಕಪ್ನಲ್ಲಿ ದೀಪಿಕಾ ಈವರೆಗೆ 9 ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದರೆ, 12 ಬೆಳ್ಳಿ ಹಾಗೂ 7 ಕಂಚಿನ ಪದಕವನ್ನು ಜಯಿಸಿದ್ದಾರೆ. ಎರಡು ಬಾರಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ. ಇದಕ್ಕೂ ಮುನ್ನ ಎರಡು ಬಾರಿ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದಾರೆ. 2012 ಹಾಗೂ 2016ರ ಒಲಿಂಪಿಕ್ಸ್ನಲ್ಲಿ ಭಾರತವನ್ನು ದೀಪಿಕಾ ಪ್ರತಿನಿಧಿಸಿದ್ದಾರೆ. ಈಗ ಮುಂದಿನ ತಿಂಗಳು ನಡೆಯುವ ಟೋಕಿಯೋ ಒಲಿಂಪಿಕ್ಸ್ಗೂ ದೀಪಿಕಾ ಕುಮಾರಿ ಆಯ್ಕೆಯಾಗಿದ್ದಾರೆ. ಮಹಿಳಾ ವಿಭಾಗದಲ್ಲಿ ಆಯ್ಕೆಯಾಗಿರುವ ಭಾರತದ ಏಕೈಕ ಆರ್ಚರ್ ಆಗಿದ್ದಾರೆ ದೀಪಿಕಾ ಕುಮಾರಿ.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ನಲ್ಲಿ ಮಹಿಳಾ ವಿಭಾಗದ ಸ್ಪರ್ಧೆಯಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕಾತ್ ಮತ್ತು ಕೋಮಲಿಕಾ ಬ್ಯಾರಿ ಅವರ ತಂಡ ಮೆಕ್ಸಿಕೋ ತಂಡವನ್ನು ಮಣಿಸಿ ಚಿನ್ನವನ್ನು ಗೆದ್ದುಕೊಂಡಿತು. ಅದಾದ ನಂತರ ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ತನ್ನ ಜೋಡಿ ಅತನು ದಾಸ್ ಜೊತೆಗೆ ನೆದರ್ಲ್ಯಾಂಡ್ ತಂಡವನ್ನು ಮಣಿಸಿ ಚಿನ್ನದ ಪದಕವನ್ನು ಗೆದ್ದರು. 5-3 ಅಂತರದಿಂದ ಈ ಗೆಲುವು ಸಾಧಿಸಿತು. ಈ ಎರಡು ಚಿನ್ನದ ಪದಕದ ನಂತರ ವೈಯ್ಯಕ್ತಿಕ ವಿಭಾಗದಲ್ಲಿಯೂ ದೀಪಿಕಾ ಕುಮಾರಿ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಕ್ಕಿದರು. ರಷ್ಯಾದ 17ನೇ ಶ್ರೇಯಾಂಕಿತೆ ಎಲೆನಾ ಒಸಿಪೋವಾ ಅವರನ್ನು 6-0 ಅಂತರದಿಂದ ಮಣಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಮೂಲಕ ದೀಪಿಕಾ ಜಾಗತಿಕ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm