ಬ್ರೇಕಿಂಗ್ ನ್ಯೂಸ್
03-07-21 10:34 am MYKHEL: Madhukara Shetty ಕ್ರೀಡೆ
ನವದೆಹಲಿ, ಜುಲೈ 3: ಭಾರತದ ಭರವಸೆಯ ಈಜುಪಟು ಮಾನಾ ಪಟೇಲ್ ಶುಕ್ರವಾರ ಐಡಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2020ಗೆ ಆಯ್ಕೆಯಾದ ಭಾರತದ ಮೊದಲ ಸ್ವಿಮ್ಮರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರಾಗಿದ್ದಾರೆ. ಯೂನಿವರ್ಸಾಲಿಟಿ ಕೋಟಾದಲ್ಲಿ ಮಾನಾ ಪಟೇಲ್ ಈ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.
ಈ ಮೂಲಕ 21ರ ಹರೆಯದ ಮಾನಾ ಪಟೇಲ್ ಸ್ಮಿಮ್ಮರ್ಗಳಾದ ಸಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜನ್ ಅವರನ್ನು ಒಳಗೊಂಡ ಭಾರತದ ಸ್ವಿಮ್ಮಿಂಗ್ ಸ್ಕ್ವಾಡ್ಗೆ ಸೇರ್ಪಡೆಗೊಂಡಿದ್ದಾರೆ. ಈ ತಿಂಗಳ ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್ನ ರಾಜಧಾನಿ ಟೋಕಿಯೋದಲ್ಲಿ ಈ ಮಹತ್ವದ ಕ್ರೀಡಾಕೂಟ ನಡೆಯಲಿದೆ.

ಮಾನಾ ಮಟೇಲ್ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಪುರುಷ ಸ್ಪರ್ಧಿಗಳಾದ ಸುಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜ್ ಕ್ರಮವಾಗಿ 200 ಮೀಟರ್ ಬಟರ್ಫ್ಲೈ ಹಾಗೂ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರೂ ಕಳೆದ ತಿಂಗಳು ರೋಮ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗೊಟ್ಟಿಸಿಕೊಂಡಿದ್ದಾರೆ. "ಇದೊಂದು ಅದ್ಭುತವಾದ ಅನುಭವ. ಒಲಿಂಪಿಕ್ಸ್ ಬಗ್ಗೆ ನಾನು ನನ್ನ ಸಹ ಈಜುಗಾರರಿಂದ ಸಾಕಷ್ಟು ಕೇಳಿದ್ದೇನೆ ಹಾಗೂ ಟೆಲಿವಿಶನ್ನಲ್ಲಿ ಸಾಕಷ್ಟು ಬಾರಿ ನೋಡಿದ್ದೇನೆ. ಅದರ ಚಿತ್ರಗಳನ್ನು ಕೂಡ ತುಂಬಾ ಬಾರಿ ನೋಡಿದ್ದೇನೆ. ಆದರೆ ಈ ಬಾರಿ ನಾನು ಅದರಲ್ಲಿ ಭಾಗಿಯಾಗಲಿದ್ದು ವಿಶ್ವಶ್ರೇಷ್ಠ ಸ್ಪರ್ಧಿಗಳೊಂದಿಗೆ ಪೈಪೋಟಿಗೆ ಇಳಿಯುವುವುದು ನನಗೆ ರೋಮಾಂಚನವನ್ನುಂಟು ಮಾಡುತ್ತಿದೆ" ಎಮದು ಗುಜರಾತ್ ಮೂಲದ ಮಾನಾ ಪಟೇಲ್ ಒಲಿಂಪಿಕ್ಸ್.ಕಾಮ್ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇನ್ನು ಮಾನಾ ಪಟೇಲ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿರುವುದಕ್ಕೆ ಭಾರತದ ಕ್ರೀಡಾ ಸಚಿವ ಕಿರಣ್ ರಿಜಿಜು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕ್ರೀಡಾ ಸಚಿವರು "ಬ್ಯಾಕ್ಸ್ಟ್ರೋಮ್ ಸ್ವಿಮ್ಮರ್ ಮಾನಾ ಪಟೇಲ್ ಭಾರತ ಪ್ರಥಮ ಮಹಿಳಾ ಹಾಗೂ ಮೂರನೇ ಸ್ವಿಮ್ಮರ್ ಆಗಿ ಟೋಕಿಯೋ ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದಾರೆ. ಅಭಿನಂದನೆಗಳು ಮಾನಾ. ಉತ್ತಮ ಸಾಧನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm