ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm