ಬ್ರೇಕಿಂಗ್ ನ್ಯೂಸ್
20-07-21 11:23 am MYKHEL: Madhukara Shetty ಕ್ರೀಡೆ
ಟೋಕಿಯೋ, ಜುಲೈ20: ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲು ತೆರಳಿರುವ ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ತನ್ನ ಅಭ್ಯಾಸವನ್ನು ಆರಂಭಿಸಿದೆ. ಭಾನುವಾರ ಟೋಕಿಯೋ ತಲುಪಿದ್ದ ಭಾರತೀಯ ಕ್ರೀಡಾಪಟುಗಳ ತಂಡ ಸೋಮವಾರ ಮೈದಾನಕ್ಕಿಳಿದು ಅಭ್ಯಾಸ ಪ್ರಾರಂಭ ಮಾಡಿದ್ದಾರೆ. ಭಾನುವಾರ ಭಾರತದ ಮೊದಲ ಬ್ಯಾಚ್ನ ಕ್ರೀಡಾಪಟುಗಳ ತಂಡ ಟೋಕಿಯೋ ತಲುಪಿತ್ತು. ಮುಂಜಾನೆ ಕೆಲ ಕೋವಿಡ್ ನಿಯಮಗಳನ್ನು ಪೂರೈಸಿದ ಬಳಿಕ ಒಲಿಂಪಿಕ್ಸ್ ಕ್ರೀಡಾಗ್ರಾಮವನ್ನು ಪ್ರವೇಶಿಸಿತ್ತು.
ಆರ್ಚರ್ಗಳಾದ ದೀಪಿಕಾ ಕುಮಾರಿ ಹಾಗೂ ಅತನು ದಾಸ್, ಟೇಬಲ್ ಟೆನ್ನಿಸ್ ಆಟಗಾರರಾದ ಜಿ ಸಥಿಯನ್ ಹಾಗೂ ಎ ಶರತ್ ಕಮಾಲ್, ಶಟ್ಲರ್ಗಳಾದ ಪಿವಿ ಸಿಂಧು ಮತ್ತು ಬಿ ಸಾಯಿ ಪ್ರಣೀತ್ ಹಾಗೂ ಜಿಮ್ನ್ಯಾಸ್ಟಿಕ್ ಪಟು ಪ್ರಣತಿ ನಾಯಕ್ ತಮ್ಮ ಅಭ್ಯಾಸವನ್ನು ಸೋಮವಾರ ಆರಂಭಿಸಿದ್ದಾರೆ.

ಆರ್ಚರಿ ಜೋಡಿಗಳಾದ ಅತನು ದಾಸ್ ಹಾಗೂ ದೀಪಿಕಾ ಕುಮಾರಿ ಸೋಮವಾರ ಮುಂಜಾನೆ ಯುಮೆನೋಶಿಮಾ ಪಾರ್ಕ್ನಲ್ಲಿ ತಮ್ಮ ಅಂತಿಮ ಹಂತದ ಅಭ್ಯಾಸವನ್ನು ಆರಂಭಿಸಿದರು. ಮೊದಲ ಒಲಿಂಪಿಕ್ಸ್ ಪದಕದ ಮೇಲೆ ಕಣ್ಣಿಟ್ಟಿರುವ ಟೇಬಲ್ ಟೆನ್ನಿಸ್ ಆಟಗಾರರಾದ ಸಥಿಯನ್ ಹಾಗೂ ಶರತ್ ಕಮಾಲ್ ಕೂಡ ತಮ್ಮ ಸಿದ್ಧತೆಯನ್ನು ನಡೆಸಿದ್ದಾರೆ. ಇನ್ನು ಕೋಚ್ ಲಕ್ಷ್ಮಣ್ ಮನೋಹರ್ ಶರ್ಮಾ ಅವರ ಉಪಸ್ಥಿತಿಯಲ್ಲಿ ಜಿಮ್ನ್ಯಾಸ್ಟಿಕ್ ಆಟಗಾರ್ತಿ ಪ್ರಣತಿ ನಾಯಕ್ ಕೂಡ ಸಿದ್ಧತೆ ಪ್ರಾರಂಭಿಸಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ನ ಸಿಂಗಲ್ಸ್ ತಂಡದ ಕೋಚ್ ಪಾರ್ಕ್ ತಯೀ ಸಾಂಗ್ ಅವರ ನೇತೃತ್ವದಲ್ಲಿ ಸಿಂಗಲ್ಸ್ ವಿಭಾಗದ ಆಟಗಾರರಾದ ಪಿವಿ ಸಿಂಧು ಹಾಗೂ ಪ್ರನೀತ್ ಅಭ್ಯಾಸವನ್ನು ನಡೆಸಿದರು. ಮತ್ತೊಂದೆಡೆ ಡಬಲ್ಸ್ ಜೋಡಿಯಾದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ಸಾಯಿರಾಜ್ ರಂಕಿರೆಡ್ಡಿಗೆ ಕೋಚ್ ಮಥಿಯಾಸ್ ಬೋಯಿ ಮಾರ್ಗದರ್ಶನ ನೀಡಿದರು.

ಈ ಮಧ್ಯೆ ಟೋಕಿಯೋ ಒಲಿಂಪಿಕ್ಸ್ಗೆ ಕೊರೊನಾವೈರಸ್ನ ಆತಂಕ ಹೆಚ್ಚಾಗುತ್ತಲೇ ಇದೆ. ಆಯೋಜಕ ಸಿಬ್ಬಂದಿಗಳ ಜೊತೆಗೆ ಈಗ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಕೂಡ ಕೊರೊನಾವೈರಸ್ಗೆ ತುತ್ತಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅಮೇರಿಕಾದ ಯುವ ಟೆನ್ನಿಸ್ ಆಟಗಾರ್ತಿ ಕೋಕೋ ಗೌಫ್ ಕೊರೊನಾವೈರಸ್ಗೆ ತುತ್ತಾಗಿ ಟೂರ್ನಿಯಿಂದ ಅನಿವಾರ್ಯವಾಗಿ ಹೊರಗುಳಿಯುವ ಅನಿವಾರ್ಯತೆಗೆ ಒಳಗಾದ ನಂತರ ಅಮೆರಿಕಾದ ಮಹಿಳಾ ಜಿಮ್ನ್ಯಾಸ್ಟ್ ಕೂಡ ಕೊರೊನಾವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಇವರ ಜೊತೆಗೆ ಮತ್ತೋರ್ವ ಸದಸ್ಯರನ್ನು ಕೂಡ ಐಸೋಲೇಶನ್ಗೆ ಒಳಪಡಿಸಲಾಗಿದೆ.
(Kannada Copy of Mykhel Kannada)
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm