ಬ್ರೇಕಿಂಗ್ ನ್ಯೂಸ್
22-07-21 10:38 am MYKHEL: Sadashiva ಕ್ರೀಡೆ
ಟೋಕಿಯೋ, ಜುಲೈ 22: ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಈ ಸಂದರ್ಭದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಹಿಂದೆಂದೂ ಕಂಡಿರದ ಅತ್ಯಂತ ವಿಚಿತ್ರ ಸನ್ನಿವೇಶವನ್ನು ಕೊರೊನಾವೈರಸ್ನ ಕಾರಣದಿಂದಾಗಿ ಎದುರಿಸುತ್ತಿದೆ. ಸಾಕಷ್ಟು ಕಠಿಣ ನಿಯಮಗಳನ್ನು ಹೊಂದಿರುವ ಹೊರತಾಗಿಯೂ ಕೊರೊನಾವೈರಸ್ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗುತ್ತಿದೆ.
ಗುರುವಾರ ಟೋಕಿಯೋ ಒಲಿಂಪಿಕ್ಸ್ ಆಯೋಜಕರು ಕೋವಿಡ್ ಹೊಸ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರಲ್ಲಿ ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್ಗಳಿಗೆ ಕೊರೊನಾವೈರಸ್ ಇರುವುದು ದೃಢಪಟ್ಟಿದೆ. 11 ಹೊಸ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗಿದ್ದು ಇದರಲ್ಲಿ ಇಬ್ಬರು ಅಥ್ಲೀಟ್ಗಳಾಗಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 86 ಕೊರೊನಾವೈರಸ್ ಪ್ರಕರಣಗಳು ಒಲಿಂಪಿಕ್ಸ್ಗೆ ಸಂಬಂಧಿಸಿದ ಕ್ರೀಡಾಪಟುಗಳು ಹಾಗೂ ಇತರ ಸಿಬ್ಬಂದಿಗಳಿಗೆ ಕಾಣಿಸಿಕೊಂಡಿದೆ.

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಕೊರೊನಾವೈರಸ್ಗೆ ತುತ್ತಾದಂತಾ ಸಂದರ್ಭದಲ್ಲಿ ಪಂದ್ಯಗಳನ್ನು ಮುಂದುವರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ವಿಚಾರವಾಗಿ ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಒಲಿಂಪಿಕ್ಸ್ ಸುಸೂತ್ರವಾಗಿ ನೆರವೇರಲು ಯಾವುದೇ ಅಡ್ಡಿಯಾಗಲಾರದು ಎಂಬ ವಿಶ್ವಾಸ ಒಲಿಂಪಿಕ್ಸ್ ಆಯೋಜಕರಲ್ಲಿದೆ.
ಇನ್ನು ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ಈಗಾಗಲೇ ಟೋಕಿಯೋದ ಕ್ರೀಡಾಗ್ರಾಮದಲ್ಲಿ ಮೂರು ಮಹಡಿಯ ಕಟ್ಟಡದಲ್ಲಿ ವಾಸ್ತವ್ಯದಲ್ಲಿದ್ದಾರೆ. ಕೊರೊನಾವೈರಸ್ನ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಕ್ರೀಡಾಪಟುಗಳು ಸಾಕಷ್ಟು ಎಚ್ಚರಿಕೆಯನ್ನು ವಹಿಸುತ್ತಿದ್ದು ಅಭ್ಯಾಸಕ್ಕೆ ನಿಗದಿಪಡಿಸಿರುವ ಸ್ಥಳವನ್ನು ಹೊರತುಪಡಿಸಿ ಬೇರೆಲ್ಲೂ ತೆರಳದಂತೆ ತಮಗೆ ತಾವೇ ನಿರ್ಬಂಧಿಸಿಕೊಂಡಿದ್ದಾರೆ. ಕ್ರೀಡಾಗ್ರಾಮದ ಒಳಗೆ ಕ್ರೀಡಾಪಟುಗಳ ಓಡಾಟಕ್ಕೆ ಯಾವುದೇ ನಿರ್ಬಂಧಗಳು ಇಲ್ಲದ ಕಾರಣ ಭಾರತೀಯ ಕ್ರೀಡಾಪಟುಗಳು ಈ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm