ಬ್ರೇಕಿಂಗ್ ನ್ಯೂಸ್
22-07-21 10:38 am MYKHEL: Sadashiva ಕ್ರೀಡೆ
ಟೋಕಿಯೋ, ಜುಲೈ 22: ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಈ ಸಂದರ್ಭದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಹಿಂದೆಂದೂ ಕಂಡಿರದ ಅತ್ಯಂತ ವಿಚಿತ್ರ ಸನ್ನಿವೇಶವನ್ನು ಕೊರೊನಾವೈರಸ್ನ ಕಾರಣದಿಂದಾಗಿ ಎದುರಿಸುತ್ತಿದೆ. ಸಾಕಷ್ಟು ಕಠಿಣ ನಿಯಮಗಳನ್ನು ಹೊಂದಿರುವ ಹೊರತಾಗಿಯೂ ಕೊರೊನಾವೈರಸ್ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗುತ್ತಿದೆ.
ಗುರುವಾರ ಟೋಕಿಯೋ ಒಲಿಂಪಿಕ್ಸ್ ಆಯೋಜಕರು ಕೋವಿಡ್ ಹೊಸ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರಲ್ಲಿ ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್ಗಳಿಗೆ ಕೊರೊನಾವೈರಸ್ ಇರುವುದು ದೃಢಪಟ್ಟಿದೆ. 11 ಹೊಸ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗಿದ್ದು ಇದರಲ್ಲಿ ಇಬ್ಬರು ಅಥ್ಲೀಟ್ಗಳಾಗಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 86 ಕೊರೊನಾವೈರಸ್ ಪ್ರಕರಣಗಳು ಒಲಿಂಪಿಕ್ಸ್ಗೆ ಸಂಬಂಧಿಸಿದ ಕ್ರೀಡಾಪಟುಗಳು ಹಾಗೂ ಇತರ ಸಿಬ್ಬಂದಿಗಳಿಗೆ ಕಾಣಿಸಿಕೊಂಡಿದೆ.

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಕೊರೊನಾವೈರಸ್ಗೆ ತುತ್ತಾದಂತಾ ಸಂದರ್ಭದಲ್ಲಿ ಪಂದ್ಯಗಳನ್ನು ಮುಂದುವರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ವಿಚಾರವಾಗಿ ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಒಲಿಂಪಿಕ್ಸ್ ಸುಸೂತ್ರವಾಗಿ ನೆರವೇರಲು ಯಾವುದೇ ಅಡ್ಡಿಯಾಗಲಾರದು ಎಂಬ ವಿಶ್ವಾಸ ಒಲಿಂಪಿಕ್ಸ್ ಆಯೋಜಕರಲ್ಲಿದೆ.
ಇನ್ನು ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ಈಗಾಗಲೇ ಟೋಕಿಯೋದ ಕ್ರೀಡಾಗ್ರಾಮದಲ್ಲಿ ಮೂರು ಮಹಡಿಯ ಕಟ್ಟಡದಲ್ಲಿ ವಾಸ್ತವ್ಯದಲ್ಲಿದ್ದಾರೆ. ಕೊರೊನಾವೈರಸ್ನ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಕ್ರೀಡಾಪಟುಗಳು ಸಾಕಷ್ಟು ಎಚ್ಚರಿಕೆಯನ್ನು ವಹಿಸುತ್ತಿದ್ದು ಅಭ್ಯಾಸಕ್ಕೆ ನಿಗದಿಪಡಿಸಿರುವ ಸ್ಥಳವನ್ನು ಹೊರತುಪಡಿಸಿ ಬೇರೆಲ್ಲೂ ತೆರಳದಂತೆ ತಮಗೆ ತಾವೇ ನಿರ್ಬಂಧಿಸಿಕೊಂಡಿದ್ದಾರೆ. ಕ್ರೀಡಾಗ್ರಾಮದ ಒಳಗೆ ಕ್ರೀಡಾಪಟುಗಳ ಓಡಾಟಕ್ಕೆ ಯಾವುದೇ ನಿರ್ಬಂಧಗಳು ಇಲ್ಲದ ಕಾರಣ ಭಾರತೀಯ ಕ್ರೀಡಾಪಟುಗಳು ಈ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡಿದ್ದಾರೆ.
(Kannada Copy of Mykhel Kannada)
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm