ಬ್ರೇಕಿಂಗ್ ನ್ಯೂಸ್
01-08-20 10:39 am Headline Karnataka News Network ಕ್ರೀಡೆ
ಮುಂಬೈ: ಟೀ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಇದೀಗ ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಹಾಗೂ ಬಿಗ್ ಬಾಸ್ನ ಮಾಜಿ ಸ್ಪರ್ಧಿ ಹಾಗೂ ಡಾನ್ಸರ್ ನತಾಶಾ ಸ್ಟಾಂಕೋವಿಕ್ ದಂಪತಿಗೆ ಗುರುವಾರ ಗಂಡು ಮಗುವಾಗಿದೆ. ಗಂಡು ಮಗುವಿನ ತಂದೆಯಾದ ಖುಷಿಯನ್ನು ಪಾಂಡ್ಯ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನಮಗೆ ಗಂಡು ಮಗುವಿನ ಆಗಮನವಾಗಿದೆ ಎಂದು ಬರೆದುಕೊಂಡಿದ್ದರು. ಜೊತೆಗೆ ಪಾಂಡ್ಯ ಮಗುವಿನ ಕೈ ಹಿಡಿದುಕೊಂಡಿದ್ದು, ಪುತ್ರನ ಮುಖ ಕಾಣದ ಫೋಟೋವನ್ನು ಅಪ್ಲೋಡ್ ಮಾಡಿದ್ದರು.
ಇಂದು ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ತಮ್ಮ ಮಗನನ್ನು ಎರಡು ಕೈಗಳಿಂದ ಎತ್ತಿಕೊಂಡಿದ್ದು, ಮಗುವಿನ ಮುಖ ನೋಡುತ್ತಾ ಪಾಂಡ್ಯ ನಗುತ್ತಿದ್ದಾರೆ. ಈ ಫೋಟೋಗೆ “ದೇವರಿಂದ ಆಶೀರ್ವಾದ” ಎಂದು ಬರೆದಿದ್ದು, ನಮಸ್ಕಾರ ಮಾಡುವ ಮತ್ತು ಹಾರ್ಟ್ ಎಮೋಜಿಯನ್ನು ಹಾಕಿ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.
ಪಾಂಡ್ಯ ಫೋಟೋ ಅಪ್ಲೋಡ್ ಮಾಡಿದ ಒಂದು ಗಂಟೆಯಲ್ಲಿ 13 ಲಕ್ಷಕ್ಕೂ ಅಧಿಕ ಮಂದಿ ಲೈಕ್ಸ್ ಮಾಡಿದ್ದಾರೆ. ಜೊತೆ ಹಾರ್ದಿಕ್ ಪಾಂಡ್ಯಗೆ ಶುಭಾ ಕೋರುತ್ತಿದ್ದಾರೆ.
ಬಹು ಸಮಯದಿಂದ ಒಟ್ಟಿಗೆ ಓಡಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಸರ್ಬಿಯನ್ ಮಾಡೆಲ್, ನಟಿ ನತಾಶಾ ಸ್ಟಾಂಕೋವಿಕ್ ಹೊಸ ವರ್ಷದ ಮೊದಲ ದಿನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಕುರಿತ ವಿಡಿಯೋ ಹಾಗೂ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು.
ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್ಸ್ಟಾದಲ್ಲಿ ಗೆಳತಿ ನತಾಶಾರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದ ಪಾಂಡ್ಯ, “ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂಧವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ. ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ” ಎಂದು ಬರೆದುಕೊಂಡಿದ್ದರು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm