ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm