ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm