ಬ್ರೇಕಿಂಗ್ ನ್ಯೂಸ್
07-08-21 05:46 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 7: ಭಾರತೀಯ ಕ್ರೀಡಾಭಿಮಾನಿಗಳ ಪಾಲಿಗೆ ಇಂದು ಮರೆಯಲಾರದ ದಿನ. ಇದೇ ಮೊದಲ ಬಾರಿಗೆ ಭಾರತೀಯನೊಬ್ಬ ಒಲಿಂಪಿಕ್ ಅತ್ಲೀಟ್ ವಿಭಾಗದಲ್ಲಿ ಚಿನ್ನದ ಬೇಟೆಯಾಡಿ ಇತಿಹಾಸ ಸೃಷ್ಟಿಸಿದ್ದಾನೆ. ಜಾವ್ಲಿನ್ ಥ್ರೋ ವಿಭಾಗದಲ್ಲಿ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ. 87.58 ಮೀಟರ್ ದೂರಕ್ಕೆ ಎಸೆಯುವ ಮೂಲಕ ನೀರಜ್ ಚೋಪ್ರಾ ಹೊಸ ಚರಿತ್ರೆ ಸೃಷ್ಟಿಸಿದ್ದು, ವಿಶ್ವದ ಗಮನ ಗೆದ್ದಿದ್ದಾರೆ.
ಭಾರತದ ಯಾವುದೇ ಅತ್ಲೀಟ್ ಒಲಿಂಪಿಕ್ ನಲ್ಲಿ ಈವರೆಗೆ ಪದಕ ಪಡೆದಿದ್ದೇ ಇಲ್ಲ. ಆಫ್ರಿಕನ್ ಮೂಲದವರು ಅಥವಾ ಜರ್ಮನಿ, ಚೀನಾ ಮೂಲದವರು ಮಾತ್ರ ಅತ್ಲೀಟ್ ನಲ್ಲಿ ಪ್ರಾಬಲ್ಯ ಪಡೆದಿದ್ದರು. ಅಂಥದ್ದರಲ್ಲಿ ಭಾರತದ ನೀರಜ್ ಚೋಪ್ರಾ ಜಾವ್ಲಿನ್ ಥ್ರೋ ವಿಭಾಗದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.



ಚೋಪ್ರಾ ಮೊದಲ ಅರ್ಹತಾ ಸುತ್ತಿನಲ್ಲೇ 86.59 ಮೀಟರ್ ದೂರಕ್ಕೆ ಜಾವ್ಲಿನ್ ಎಸೆದು ಗಮನ ಸೆಳೆದಿದ್ದರು. ಅರ್ಹತಾ ಸುತ್ತಿನಲ್ಲಿ ಅತ್ಯಂತ ಹೆಚ್ಚು ದೂರಕ್ಕೆ ಎಸೆದಿದ್ದು ಈ ಬಾರಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದರು. ಎರಡನೇ ಸುತ್ತಿನಲ್ಲಿ 87.58 ಮೀಟರ್ ದೂರಕ್ಕೆ ಎಸೆದು ಪದಕ ಗೆಲ್ಲುವತ್ತ ಮತ್ತಷ್ಟು ಹತ್ತಿರವಾಗಿದ್ದರು. ಕೊನೆಗೆ, ಇದೇ 87.58 ಮೀಟರ್ ಉದ್ದಕ್ಕೆ ಎಸೆದ ಸಾಧನೆಯನ್ನು ಅತಿ ಗರಿಷ್ಠವೆಂದು ಪರಿಗಣಿಸಿ ಚಿನ್ನದ ಪದಕದ ಘೋಷಣೆ ಮಾಡಲಾಗಿದೆ.
ಜೆಕ್ ರಿಪಬ್ಲಿಕ್ ದೇಶದ ವೆಡ್ಲೆಜ್ ಜೇಕಬ್ 86.67 ಮೀಟರ್ ಸಾಧನೆಯ ಮೂಲಕ ಎರಡನೇ ಸ್ಥಾನಿಯಾದರು. ಅದೇ ದೇಶದ ವೆಸ್ಲೀ ಎಂಬಾತ 85.44 ಮೀಟರ್ ದೂರದ ಸಾಧನೆಯ ಮೂಲಕ ತೃತೀಯ ಸ್ಥಾನಿಯಾಗಿದ್ದಾರೆ. ಭಾರತದ ಪಾಲಿಗೆ ಎರಡನೇ ವೈಯಕ್ತಿಕ ಸ್ವರ್ಣದ ಸಾಧನೆಯಿದು. ಈ ಹಿಂದೆ ಶೂಟರ್ ಅಭಿನವ್ ಬಿಂದ್ರಾ ಚಿನ್ನದ ಸಾಧನೆ ಮಾಡಿದ್ದರು.
History has been scripted at Tokyo! What @Neeraj_chopra1 has achieved today will be remembered forever. The young Neeraj has done exceptionally well. He played with remarkable passion and showed unparalleled grit. Congratulations to him for winning the Gold. #Tokyo2020 https://t.co/2NcGgJvfMS
— Narendra Modi (@narendramodi) August 7, 2021
Javelin thrower Neeraj Chopra won a historic athletics gold medal to become India's second ever individual Olympic gold medallist after shooter Abhinav Bindra. Wrestler Bajrang Punia
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm