ಬ್ರೇಕಿಂಗ್ ನ್ಯೂಸ್
08-08-21 01:34 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 8 : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಚಿನ್ನದ ಬೇಟೆಯಾಡಿರುವ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾಕಷ್ಟು ಗಣ್ಯರು ಶುಭ ಕೋರಿದ್ದಾರೆ. ಇದೀಗ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ವಿಶೇಷ ಉಡುಗೊರೆಯೊಂದನ್ನು ಘೋಷಿಸಿದ್ದಾರೆ.
ಮಹೀಂದ್ರಾ ಕಂಪನಿ ಮಾಲೀಕ ಆನಂದ್ ಮಹೀಂದ್ರಾ ಅವರು ಚಿನ್ನದ ಹುಡುಗ ನೀರಜನಿಗೆ ಭರ್ಜರಿ ಉಡುಗೊರೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಮಹೀಂದ್ರಾ XUV 700 ಕಾರು ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ನೀರಜ್ ಉಡುಗೊರೆ ನೀಡಲು XUV 700 ಕಾರು ಸಿದ್ಧಪಡಿಸಿ ಎಂದು ತಮ್ಮ ತಂಡಕ್ಕೆ ಸೂಚಿಸಿದ್ದಾರೆ.



ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.
ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.
Neeraj Chopra claimed India’s first-ever track-and-field Olympic medal with a gold medal at Tokyo Games, cash rewards and congratulatory messages have started flowing in from various quarters. In a latest development, Mahindra Group chairman Anand Mahindra on Saturday promised to gift Neeraj Chopra a brand new Mahindra XUV700.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm